ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

Published : Dec 12, 2023, 10:56 AM ISTUpdated : Dec 12, 2023, 09:02 PM IST

ಮಧ್ಯ ಪ್ರದೇಶದಲ್ಲಿ ಹೊಸಬರಿಗೆ ಮಣೆ ಹಾಕಿದ ಹೈಕಮಾಂಡ್..!
ಮಧ್ಯಪ್ರದೇಶಕ್ಕೆ ಮೋಹನ್ ಯಾದವ್ ಮುಂದಿನ ಮುಖ್ಯಮಂತ್ರಿ
ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕ ಮೋಹನ್

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ ಹೈಕಮಾಂಡ್‌ಗೆ(BJP Highcommand) ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಡ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಇಂದು ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಸದ್ಯ ಮಧ್ಯಪ್ರದೇಶದಲ್ಲಿ ಹೊಸಬರಿಗೆ ಹೈಕಮಾಂಡ್‌ ಮಣೆ ಹಾಕಿದೆ. ಮೋಹನ್‌ ಯಾದವ್‌ ಮುಂದಿನ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಾರಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಮೋಹನ್ ಯಾದವ್ ಈ ಬಾರಿ ಸಿಎಂ ಆಗಿದ್ದು, ಹಿಂದುಳಿದ ವರ್ಗದ ನಾಯಕನಿಗೆ ಸಿಎಂ ಪಟ್ಟ ಕಟ್ಟಲಾಗಿದೆ. ಮಧ್ಯ ಪ್ರದೇಶದಲ್ಲಿ 18 ವರ್ಷದ ಶಿವರಾಜ್ ಸಿಂಗ್ ಆಡಳಿತ ಅಂತ್ಯವಾದಂತೆ ಆಗಿದೆ. ಛತ್ತೀಸ್‌ಗಢದಂತೆಯೇ ಮಧ್ಯಪ್ರದೇಶದಲ್ಲೂ ಇಬ್ಬರು ಡಿಸಿಎಂ ಸೃಷ್ಟಿ ಮಾಡಲಾಗಿದೆ. ಜಗದೀಶ್ ದೇವ್ಡಾ, ರಾಜೇಂದ್ರ ಶುಕ್ಲಾಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಹಿರಿಯ ನಾಯಕ ನರೇಂದ್ರ ಸಿಂಗ್ ಥೋಮರ್‌ಗೆ ಸ್ಪೀಕರ್ ಪಟ್ಟ ಕೊಡುವ ಸಾಧ್ಯತೆ ಇದೆ. ವಿಷ್ಣುದೇವ್ ಸಾಯಿ ಛತ್ತೀಸ್‌ಗಢ ಮುಂದಿನ ಸಿಎಂ ಆಗಿದ್ದು, ಬುಡಕಟ್ಟು ಸಮುದಾಯಕ್ಕೆ ಮಣೆ ಹಾಕಿದ ಹೈಕಮಾಂಡ್. ಮಾಜಿ  ಸಿಎಂ ರಮಣ್ ಸಿಂಗ್ ಅವರ ಆಪ್ತನಿಗೆ CM ಪಟ್ಟ ಕಟ್ಟಲಾಗಿದೆ. 

ಇದನ್ನೂ ವೀಕ್ಷಿಸಿ:  ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more