ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

ಮಧ್ಯಪ್ರದೇಶದಲ್ಲಿ ಚೌವ್ಹಾಣ್ ರಾಜ್ಯಭಾರ ಅಂತ್ಯ..! 3 ಬಾರಿ ಶಾಸಕನಿಗೆ ಸಿಎಂ ಪಟ್ಟ ಕಟ್ಟಿದ ಹೈಕಮಾಂಡ್ !

Published : Dec 12, 2023, 10:56 AM ISTUpdated : Dec 12, 2023, 09:02 PM IST

ಮಧ್ಯ ಪ್ರದೇಶದಲ್ಲಿ ಹೊಸಬರಿಗೆ ಮಣೆ ಹಾಕಿದ ಹೈಕಮಾಂಡ್..!
ಮಧ್ಯಪ್ರದೇಶಕ್ಕೆ ಮೋಹನ್ ಯಾದವ್ ಮುಂದಿನ ಮುಖ್ಯಮಂತ್ರಿ
ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕ ಮೋಹನ್

ಉತ್ತರದಲ್ಲಿ ತ್ರಿವಿಕ್ರಮ ಸಾಧನೆಗೈದ ಬಿಜೆಪಿ ಹೈಕಮಾಂಡ್‌ಗೆ(BJP Highcommand) ಸಿಎಂ ಆಯ್ಕೆಯೇ ಕ್ಕಗ್ಗಂಟಾಗಿತ್ತು. 3 ರಾಜ್ಯಗಳ ಪೈಕಿ ಕೊನೆಗೂ ಎರಡು ರಾಜ್ಯಗಳ ಸಿಎಂ ಆಯ್ಕೆ ಗಜಪ್ರಹಸನಕ್ಕೆ ಹೈಕಮಾಂಡ್ ತೆರೆ ಎಳೆದಿದೆ. ಛತ್ತೀಸ್‌ಗಡ(Chhattisgarh) ಸಿಎಂ  ಆಯ್ಕೆ ನಡೆಸಿದ್ದ ಬಿಜೆಪಿ ಹೈಕಮಾಂಡ್ ಇಂದು ಮಧ್ಯಪ್ರದೇಶದಲ್ಲೂ(Madhya Pradesh) ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿಗೆ ತೆರೆ ಎಳೆದಿದೆ. ಸದ್ಯ ಮಧ್ಯಪ್ರದೇಶದಲ್ಲಿ ಹೊಸಬರಿಗೆ ಹೈಕಮಾಂಡ್‌ ಮಣೆ ಹಾಕಿದೆ. ಮೋಹನ್‌ ಯಾದವ್‌ ಮುಂದಿನ ಮುಖ್ಯಮಂತ್ರಿಯಾಗಿದ್ದಾರೆ. ಕಳೆದ ಬಾರಿ ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ಮೋಹನ್ ಯಾದವ್ ಈ ಬಾರಿ ಸಿಎಂ ಆಗಿದ್ದು, ಹಿಂದುಳಿದ ವರ್ಗದ ನಾಯಕನಿಗೆ ಸಿಎಂ ಪಟ್ಟ ಕಟ್ಟಲಾಗಿದೆ. ಮಧ್ಯ ಪ್ರದೇಶದಲ್ಲಿ 18 ವರ್ಷದ ಶಿವರಾಜ್ ಸಿಂಗ್ ಆಡಳಿತ ಅಂತ್ಯವಾದಂತೆ ಆಗಿದೆ. ಛತ್ತೀಸ್‌ಗಢದಂತೆಯೇ ಮಧ್ಯಪ್ರದೇಶದಲ್ಲೂ ಇಬ್ಬರು ಡಿಸಿಎಂ ಸೃಷ್ಟಿ ಮಾಡಲಾಗಿದೆ. ಜಗದೀಶ್ ದೇವ್ಡಾ, ರಾಜೇಂದ್ರ ಶುಕ್ಲಾಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಹಿರಿಯ ನಾಯಕ ನರೇಂದ್ರ ಸಿಂಗ್ ಥೋಮರ್‌ಗೆ ಸ್ಪೀಕರ್ ಪಟ್ಟ ಕೊಡುವ ಸಾಧ್ಯತೆ ಇದೆ. ವಿಷ್ಣುದೇವ್ ಸಾಯಿ ಛತ್ತೀಸ್‌ಗಢ ಮುಂದಿನ ಸಿಎಂ ಆಗಿದ್ದು, ಬುಡಕಟ್ಟು ಸಮುದಾಯಕ್ಕೆ ಮಣೆ ಹಾಕಿದ ಹೈಕಮಾಂಡ್. ಮಾಜಿ  ಸಿಎಂ ರಮಣ್ ಸಿಂಗ್ ಅವರ ಆಪ್ತನಿಗೆ CM ಪಟ್ಟ ಕಟ್ಟಲಾಗಿದೆ. 

ಇದನ್ನೂ ವೀಕ್ಷಿಸಿ:  ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more