ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

Published : May 20, 2022, 03:05 PM ISTUpdated : May 20, 2022, 03:08 PM IST

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ ಮತ್ತು ಕೇರಳದಲ್ಲಿ ಮುಂಗಾರು ಪೂರ್ವ ಮಳೆ (Rain) ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ (Assam) ಮತ್ತು ಕೇರಳದಲ್ಲಿ (Kerala) ಮುಂಗಾರು ಪೂರ್ವ ಮಳೆ ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.  ಕಳೆದೊಂದು ವಾರದಿಂದ ಈಶಾನ್ಯದ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಅರುಣಾಚಲಪ್ರದೇಶ, ತ್ರಿಪುರ, ಸಿಕ್ಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. 

ಈ ಪೈಕಿ ಅಸ್ಸಾಂ ಅತಿ ಹೆಚ್ಚು ತೊಂದರೆಗೆ ಒಳಗಾಗಿದ್ದು, ರಾಜ್ಯದ 33ರ ಪೈಕಿ 20ರಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಸುಮಾರು 2 ಲಕ್ಷ ಜನರು ಮಳೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. 33000 ಜನರಿಗೆ 55 ಪರಿಹಾರ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆ ಸಂಚಾರದ ಜೊತೆಗೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ನಲವು ಕಡೆ ಭೂ ಕುಸಿತಗಳು ಸಂಭವಿಸಿವೆ. ಈ ದುರ್ಘಟನೆಗಳಲ್ಲಿ 8 ಮಂದಿ ಸಾವನ್ನಪ್ಪಿದ್ದರೆ, 5 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ. ಬ್ರಹ್ಮಪುತ್ರ ನದಿ ದಂಡೆಯಲ್ಲಿರುವ ಸುಮಾರು 1,500 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರಾ ನದಿ ನೀರು ಮತ್ತಷ್ಟುಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಹಾಜೋಯ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 2 ಸಾವಿರ ಮಂದಿಯನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ. ಪ್ರವಾಹದಿಂದ ತೊಂದರೆಗೊಳಗಾಗಿರುವ ಪ್ರದೇಶಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಹೆಲಿಕಾಪ್ಟರ್‌ ಮುಖಾಂತರ ವಿತರಿಸಲಾಗಿದೆ.

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more