ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

Published : May 20, 2022, 03:05 PM ISTUpdated : May 20, 2022, 03:08 PM IST

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ ಮತ್ತು ಕೇರಳದಲ್ಲಿ ಮುಂಗಾರು ಪೂರ್ವ ಮಳೆ (Rain) ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ (Assam) ಮತ್ತು ಕೇರಳದಲ್ಲಿ (Kerala) ಮುಂಗಾರು ಪೂರ್ವ ಮಳೆ ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.  ಕಳೆದೊಂದು ವಾರದಿಂದ ಈಶಾನ್ಯದ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಅರುಣಾಚಲಪ್ರದೇಶ, ತ್ರಿಪುರ, ಸಿಕ್ಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. 

ಈ ಪೈಕಿ ಅಸ್ಸಾಂ ಅತಿ ಹೆಚ್ಚು ತೊಂದರೆಗೆ ಒಳಗಾಗಿದ್ದು, ರಾಜ್ಯದ 33ರ ಪೈಕಿ 20ರಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಸುಮಾರು 2 ಲಕ್ಷ ಜನರು ಮಳೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. 33000 ಜನರಿಗೆ 55 ಪರಿಹಾರ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆ ಸಂಚಾರದ ಜೊತೆಗೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ನಲವು ಕಡೆ ಭೂ ಕುಸಿತಗಳು ಸಂಭವಿಸಿವೆ. ಈ ದುರ್ಘಟನೆಗಳಲ್ಲಿ 8 ಮಂದಿ ಸಾವನ್ನಪ್ಪಿದ್ದರೆ, 5 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ. ಬ್ರಹ್ಮಪುತ್ರ ನದಿ ದಂಡೆಯಲ್ಲಿರುವ ಸುಮಾರು 1,500 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರಾ ನದಿ ನೀರು ಮತ್ತಷ್ಟುಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಹಾಜೋಯ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 2 ಸಾವಿರ ಮಂದಿಯನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ. ಪ್ರವಾಹದಿಂದ ತೊಂದರೆಗೊಳಗಾಗಿರುವ ಪ್ರದೇಶಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಹೆಲಿಕಾಪ್ಟರ್‌ ಮುಖಾಂತರ ವಿತರಿಸಲಾಗಿದೆ.

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more