ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

ಮುಂಗಾರು ಪೂರ್ವ ಮಳೆ ಅಬ್ಬರಕ್ಕೆ ಮುಳುಗಿದ ಈಶಾನ್ಯ ರಾಜ್ಯಗಳು..!

Published : May 20, 2022, 03:05 PM ISTUpdated : May 20, 2022, 03:08 PM IST

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ ಮತ್ತು ಕೇರಳದಲ್ಲಿ ಮುಂಗಾರು ಪೂರ್ವ ಮಳೆ (Rain) ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.

ದೇಶದ ಈಶಾನ್ಯ (Eastern States) ಮತ್ತು ದಕ್ಷಿಣದ ರಾಜ್ಯಗಳಾದ ಅಸ್ಸಾಂ (Assam) ಮತ್ತು ಕೇರಳದಲ್ಲಿ (Kerala) ಮುಂಗಾರು ಪೂರ್ವ ಮಳೆ ಭಾರೀ ಅನಾಹುತ ಸೃಷ್ಟಿಸಿದ್ದು, ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.  ಕಳೆದೊಂದು ವಾರದಿಂದ ಈಶಾನ್ಯದ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಅರುಣಾಚಲಪ್ರದೇಶ, ತ್ರಿಪುರ, ಸಿಕ್ಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಸಾಮಾನ್ಯ ಜನಜೀವನ ಅಸ್ತವ್ಯಸ್ಥಗೊಂಡಿದೆ. 

ಈ ಪೈಕಿ ಅಸ್ಸಾಂ ಅತಿ ಹೆಚ್ಚು ತೊಂದರೆಗೆ ಒಳಗಾಗಿದ್ದು, ರಾಜ್ಯದ 33ರ ಪೈಕಿ 20ರಲ್ಲಿ ಪ್ರವಾಹ ಕಾಣಿಸಿಕೊಂಡಿದೆ. ಸುಮಾರು 2 ಲಕ್ಷ ಜನರು ಮಳೆಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ. 33000 ಜನರಿಗೆ 55 ಪರಿಹಾರ ಕೇಂದ್ರಗಳಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆ ಸಂಚಾರದ ಜೊತೆಗೆ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತದ ಕಾರಣ ರೈಲು ಸಂಚಾರಕ್ಕೂ ಅಡ್ಡಿಯಾಗಿದೆ. ನಲವು ಕಡೆ ಭೂ ಕುಸಿತಗಳು ಸಂಭವಿಸಿವೆ. ಈ ದುರ್ಘಟನೆಗಳಲ್ಲಿ 8 ಮಂದಿ ಸಾವನ್ನಪ್ಪಿದ್ದರೆ, 5 ಲಕ್ಷಕ್ಕೂ ಅಧಿಕ ಮಂದಿ ಪ್ರವಾಹದಿಂದ ತೊಂದರೆಗೊಳಗಾಗಿದ್ದಾರೆ. ಬ್ರಹ್ಮಪುತ್ರ ನದಿ ದಂಡೆಯಲ್ಲಿರುವ ಸುಮಾರು 1,500 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಬ್ರಹ್ಮಪುತ್ರಾ ನದಿ ನೀರು ಮತ್ತಷ್ಟುಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಹಾಜೋಯ್‌ನಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ ಸುಮಾರು 2 ಸಾವಿರ ಮಂದಿಯನ್ನು ಭಾರತೀಯ ಸೇನೆ ರಕ್ಷಣೆ ಮಾಡಿದೆ. ಪ್ರವಾಹದಿಂದ ತೊಂದರೆಗೊಳಗಾಗಿರುವ ಪ್ರದೇಶಗಳಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ಹೆಲಿಕಾಪ್ಟರ್‌ ಮುಖಾಂತರ ವಿತರಿಸಲಾಗಿದೆ.

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more