Aug 26, 2021, 11:32 AM IST
ನವದೆಹಲಿ(ಆ.26): ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಗೂ ಮುನ್ನ ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆ ಮೇಲೆ ಲಸಿಕೆ ಹಾಕುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಬುಧವಾರ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಈ ತಿಂಗಳು ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಯನ್ನು ಒದಗಿಸಲಾಗಿದ್ದು, ಶಿಕ್ಷಕರ ದಿನಾಚರಣೆಗೂ ಮೊದಲು ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆಯ ಮೇಲೆ ಲಸಿಕೆ ಹಾಕುವ ಪ್ರಯತ್ನ ಮಾಡಬೇಕು’ ಎಂದು ತಿಳಿಸಿದ್ದಾರೆ.
ಇಷ್ಟೇ ಅಲ್ಲದೇ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಸುದ್ದಿಗಳ ಒಂದು ನೋಟ