Aug 25, 2021, 11:00 AM IST
ಮುಂಬೈ(ಆ.25): ‘ದೇಶಕ್ಕೆ ಸ್ವಾತಂತ್ರ್ಯ ಬಂದ ವರ್ಷದ ಮಾಹಿತಿ ಇಲ್ಲದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕಪಾಳಮೋಕ್ಷ ಮಾಡುತ್ತಿದ್ದೆ’ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಹಾರಾಷ್ಟ್ರ ಪೊಲೀಸರು ಮಂಗಳವಾರ ಮಧ್ಯಾಹ್ನ ಬಂಧಿಸಿದ್ದಾರೆ. ಆದರೆ ತಡರಾತ್ರಿ ರಾಣೆ ಅವರಿಗೆ ಜಾಮೀನು ಲಭಿಸಿದೆ.
ಅಧಿಕಾರದಲ್ಲಿದ್ದಾಗ ಕೇಂದ್ರ ಸಚಿವರೊಬ್ಬರ ಬಂಧನ 20 ವರ್ಷದಲ್ಲೇ ಮೊದಲ ಬಾರಿ ನಡೆದಿದ್ದು, ಮಾಜಿ ಮಿತ್ರರಾದ ಬಿಜೆಪಿ ಮತ್ತು ಶಿವಸೇನೆ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೂ ನಾಂದಿ ಹಾಡಿದೆ.