ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್!

Feb 2, 2024, 10:52 PM IST

ಸಂಸದ ಡಿಕೆ ಸುರೇಶ್ ಜಿಎಸ್‌ಟಿ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಅನ್ನೋ ಆಕ್ರೋಷದ ಮಾತುಗಳಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ. ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದೊಂಡಿದ್ದಾರೆ. ಆದರೆ ರಾಜ್ಯದ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಹೀಗಾಗಿ ಸಂಸದ ಸುರೇಶ್ ಸರಿಯಾಗಿ ಮಾತನಾಡಿದ್ದಾರೆ ಎಂದಿದ್ದಾರೆ. ಆದರೆ ಡಿಕೆ ಸುರೇಶ್ ಹೇಳಿಕೆಯಿಂದ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಿದ್ದು, ಕಾಂಗ್ರೆಸ್ ಸಂಕಷ್ಟಕ್ಕೆ ಕಾರಣವಾಗಿದೆ.