ಜನರ ಮಾಹಿತಿ ರಕ್ಷಣೆ, ಮಾರಾಟ ತಡೆಗೆ  ಡಿಪಿಡಿಪಿ ಕಾಯ್ದೆ ರಚನೆ: ರಾಜೀವ್‌ ಚಂದ್ರಶೇಖರ್

ಜನರ ಮಾಹಿತಿ ರಕ್ಷಣೆ, ಮಾರಾಟ ತಡೆಗೆ ಡಿಪಿಡಿಪಿ ಕಾಯ್ದೆ ರಚನೆ: ರಾಜೀವ್‌ ಚಂದ್ರಶೇಖರ್

Published : Aug 13, 2023, 04:06 PM ISTUpdated : Aug 13, 2023, 04:07 PM IST

ದೇಶದ ಪ್ರತಿಯೊಬ್ಬ ನಾಗರಿಕನ ಮಾಹಿತಿಯ ರಕ್ಷಣೆ ಮಾಡುವುದು ಹಾಗೂ ಮಾರಾಟ ಮಾಡುವುದನ್ನು ತಡೆಯಲು ‘ಡಿಜಿಟಲ್‌ ವೈಯಕ್ತಿಕ ಮಾಹಿತಿ ಸಂರಕ್ಷಣೆ ಕಾಯ್ದೆ’ ಜಾರಿಗೊಳಿಸಲಾಗಿದೆ.

ಬೆಂಗಳೂರು: ದೇಶದ ಪ್ರತಿಯೊಬ್ಬ ನಾಗರಿಕನ ಮಾಹಿತಿಯ ರಕ್ಷಣೆ ಮಾಡುವುದು ಹಾಗೂ ಮಾರಾಟ ಮಾಡುವುದನ್ನು ತಡೆಯಲು ‘ಡಿಜಿಟಲ್‌ ವೈಯಕ್ತಿಕ ಮಾಹಿತಿ ಸಂರಕ್ಷಣೆ ಕಾಯ್ದೆ’ (ಡಿಪಿಡಿಪಿ ಕಾಯ್ದೆ) ಜಾರಿಗೊಳಿಸಲಾಗಿದೆ. ಜನರ ಮಾಹಿತಿ ದುರುಪಯೋಗವಾಗದಂತೆ ತಡೆಯಲು ಬೇರೆ ದೇಶಗಳ ಕಾಯ್ದೆಯ ನೆರವು ಪಡೆಯದೆ ಭಾರತೀಯ ಕಾಯ್ದೆ ರಚಿಸಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದರು.

ಬಸವನಗುಡಿಯ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ಸಂಸದ ದಿವಸ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಡಿಜಿಟಲ್‌ ವೈಯಕ್ತಿಕ ಮಾಹಿತಿ ಸಂರಕ್ಷಣೆ ಕಾಯ್ದೆ’ ಕುರಿತು ವಿವರಿಸಿದರು.

ದೇಶದ ಪ್ರತಿಯೊಬ್ಬ ಪ್ರಜೆಯ ಮಾಹಿತಿಯನ್ನೂ ಸಂರಕ್ಷಿಸುವ ಸಲುವಾಗಿ ಡಿಪಿಡಿಪಿ ಕಾಯ್ದೆ ರೂಪಿಸಲಾಗಿದೆ. 2010ರಲ್ಲಿ ರಾಜ್ಯಸಭೆಯಲ್ಲಿ ನಾನು ಜನರ ಮಾಹಿತಿ ಸಂರಕ್ಷಣೆ ಕುರಿತಂತೆ ಖಾಸಗಿ ಬಿಲ್‌ ಮಂಡಿಸಿದ್ದೆ. ಆದರೆ, ಅಂದಿನ ಯುಪಿಎ ಸರ್ಕಾರ ಅದಕ್ಕೆ ಮಹತ್ವ ನೀಡಲಿಲ್ಲ. ಹೀಗಾಗಿ ಖಾಸಗಿತನ ಅಥವಾ ಮಾಹಿತಿ ಸಂರಕ್ಷಣೆಗೆ ಕಾಯ್ದೆ ರೂಪ ದೊರೆತಿರಲಿಲ್ಲ. ಅದಾದ ನಂತರ ದೆಹಲಿಯ ಕನೌಟ್‌ ಪ್ರದೇಶದ ಪಾಲಿಕೆ ಬಜಾರ್‌ನಲ್ಲಿ .50ಕ್ಕೆ ಜನರ ಮಾಹಿತಿ ಸೋರಿಕೆ ಮಾಡುವ ವಿಚಾರವನ್ನು ಸದನದ ಗಮನ ಸೆಳೆದಿದ್ದೆ. ಆಗಲೂ ಸರಿಯಾಗಿ ಪ್ರತಿಕ್ರಿಯೆ ದೊರೆತಿರಲಿಲ್ಲ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆ ಮೇರೆಗೆ ‘ಡಿಜಿಟಲ್‌ ವೈಯಕ್ತಿಕ ಮಾಹಿತಿ ಸಂರಕ್ಷಣೆ ಕಾಯ್ದೆ’ ಅನುಷ್ಠಾನಗೊಳಿಸಲಾಗಿದೆ ಎಂದರು.

2019ರಲ್ಲಿ ಡಿಪಿಡಿಪಿ ಕಾಯ್ದೆಯ ಕರಡು ಪ್ರತಿ ರೂಪಿಸಿ ಪ್ರಕಟಿಸಲಾಗಿತ್ತು. ಆದರೆ, ಕೊರೋನಾ ಸೇರಿ ಇನ್ನಿತರ ಕಾರಣಗಳಿಂದಾಗಿ ಅಂತಿಮ ಕಾಯ್ದೆಗೆ ಒಪ್ಪಿಗೆ ಪಡೆಯಲು ಸಾಧ್ಯವಾಗಿರಲಿಲ್ಲ. ಇದೀಗ ಲೋಕಸಭೆ, ರಾಜ್ಯಸಭೆಯಲ್ಲಿ ಅನುಮೋದನೆ ಪಡೆದು ರಾಷ್ಟ್ರಪತಿಗಳಿಂದ ಒಪ್ಪಿಗೆ ಪಡೆದು ನೋಟಿಫಿಕೇಷನ್‌ ಹೊರಡಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ತಂತ್ರಜ್ಞಾನ ಮತ್ತಷ್ಟುಅಭಿವೃದ್ಧಿ ಹೊಂದಲಿದೆ. ಆಗ ನಮ್ಮ ಮಾಹಿತಿಯ ರಕ್ಷಣೆ ಮತ್ತಷ್ಟುಕಠಿಣವಾಗಲಿದೆ. ಆದರೆ, ಡಿಪಿಡಿಪಿ ಕಾಯ್ದೆಯಿಂದಾಗಿ ಪ್ರತಿಯೊಬ್ಬ ನಾಗರಿಕನ ಮಾಹಿತಿಯೂ ಸುರಕ್ಷಿತವಾಗಿರಲಿದೆ ಎಂದು ಹೇಳಿದರು.
 
ಡಿಪಿಡಿಪಿ ಕಾಯ್ದೆಯಂತೆ ಡಿಜಿಟಲ್‌ ಪ್ಲಾಟ್‌ಫಾಮ್‌ರ್‍ಗಳು ಜನರ ಮಾಹಿತಿ ಸಂಗ್ರಹಿಸಿದ ನಂತರ ಅದನ್ನು ಬೇರೆಯವರಿಗೆ ನೀಡದಂತೆ ನಿರ್ಬಂಧ ಹೇರಲಾಗುತ್ತದೆ. ಜತೆಗೆ ಸೇವೆ ನೀಡಿದ ನಂತರ ಜನರ ಮಾಹಿತಿಯನ್ನು ಅಳಿಸಿ ಹಾಕಬೇಕು, ಯಾವ ವಿಚಾರಕ್ಕೆ ಮಾಹಿತಿ ಪಡೆಯಲಾಗುತ್ತದೆಯೇ ಅಷ್ಟಕ್ಕೆ ಮಾತ್ರ ಅದನ್ನು ಬಳಸಬೇಕು ಹಾಗೂ ಎಷ್ಟುಬೇಕೋ ಅಷ್ಟುಮಾಹಿತಿಯನ್ನು ಮಾತ್ರ ಸಂಗ್ರಹಿಸಬೇಕು ಎಂಬ ನಿರ್ಬಂಧ ವಿಧಿಸಲಾಗುತ್ತದೆ. ಒಂದು ವೇಳೆ ಕಾಯ್ದೆಯಲ್ಲಿನ ಅಂಶಗಳನ್ನು ಉಲ್ಲಂಘಿಸಿ ಜನರ ಮಾಹಿತಿ ಸೋರಿಕೆ ಮಾಡಿದರೆ ಸಂಸ್ಥೆಗೆ .250 ಕೋಟಿ ದಂಡ ವಿಧಿಸಲು ಅವಕಾಶವಿದೆ ಎಂದು ರಾಜೀವ್‌ ಚಂದ್ರಶೇಖರ್‌ ತಿಳಿಸಿದರು.

ಸಾರ್ವಜನಿಕರು ತಮ್ಮ ಮಾಹಿತಿ ಸೋರಿಕೆಯಾದ ಕುರಿತು ಡೇಟಾ ಪ್ರೊಟೆಕ್ಷನ್‌ ಬೋರ್ಡ್‌ನಲ್ಲಿ ದೂರು ದಾಖಲಿಸಬಹುದು. ಆ ದೂರನ್ನು ಬೋರ್ಡ್‌ ತನಿಖೆ ನಡೆಸಲಿದ್ದು, ಒಂದು ವೇಳೆ ಅಕ್ರಮ ಸಾಬೀತಾದರೆ ಭಾರೀ ದಂಡ ವಿಧಿಸಲಾಗುವುದು. ಎಷ್ಟುಮಾಹಿತಿ ಸೋರಿಕೆಯಾಗಿದೆಯೋ ಅಷ್ಟುಪ್ರಮಾಣದ ದಂಡ ವಿಧಿಸಲಾಗುತ್ತದೆ. ಅದು ಸರ್ಕಾರಿ ಸಂಸ್ಥೆಯಾಗಿರಬಹುದು ಅಥವಾ ಖಾಸಗಿ ಸಂಸ್ಥೆಯಾಗಿರಬಹುದು. ಎಲ್ಲ ರೀತಿಯ ಸಂಸ್ಥೆಗಳಿಗೂ ಒಂದೇ ರೀತಿಯ ದಂಡ ವಿಧಿಸಲಾಗುತ್ತದೆ ಎಂದು ವಿವರಿಸಿದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!