Lok Sabha elections 2024: ಅಂದು ಮನಮೋಹನ್ ಸಿಂಗ್ ಹೇಳಿದ್ದೇನು..? ಈಗ ಮೋದಿ ಹೇಳಿದ್ದೇನು..?

Lok Sabha elections 2024: ಅಂದು ಮನಮೋಹನ್ ಸಿಂಗ್ ಹೇಳಿದ್ದೇನು..? ಈಗ ಮೋದಿ ಹೇಳಿದ್ದೇನು..?

Published : Apr 23, 2024, 04:44 PM IST

ಲೋಕಸಭಾ ಸಮರದಲ್ಲಿ ಹೊಸ ಆಯುಧ ಪ್ರಯೋಗ!
ಚಿಂತಾಜನಕವಾಗಿದೆಯಂತಲ್ಲಾ ಕಾಂಗ್ರೆಸ್ನ ಪ್ರಣಾಳಿಕೆ!?
ಚರ್ಚೆಗೆ ಕಾರಣವಾಯ್ತೇಕೆ ಮನಮೋಹನ್ ಸಿಂಗ್ ಹೇಳಿಕೆ?

ಲೋಕಸಭಾ ಸಮರ ಅದಾಗಲೇ ಆರಂಭವಾಗಿದೆ. ಆದ್ರೆ ಅಂತಿಮ ಫಲಿತಾಂಶ ಬರೋ ತನಕ, ಯುದ್ಧದ ತೀವ್ರತೆ ಹೆಚ್ಚಾಗೋ ಲಕ್ಷಣಗಳೂ ಕಾಣ್ತಾ ಇದಾವೆ. ಅದಕ್ಕೆ ಈಗಷ್ಟೇ ಮೋದಿ ಅವರು ಕೊಟ್ಟಿರೋ ಹೇಳಿಕೆನೇ ಉದಾಹರಣೆ. ಕಾಂಗ್ರೆಸ್‌ನ ಪ್ರಣಾಳಿಕೆ, ಕಾಂಗ್ರೆಸ್(Congress) ಮಾಜಿ ಪ್ರಧಾನಿಯ ಹೇಳಿಕೆ, ಇದನ್ನೇ ಇಟ್ಕೊಂಡು ಕಾಂಗ್ರೆಸ್ ವಿರುದ್ಧ ಮುಗಿಬಿದ್ದಿದ್ದಾರೆ ಮೋದಿ(Narendra Modi). ಆದ್ರೆ, ಮೋದಿ ಮಾತಿಗೆ, ಕಾಂಗ್ರೆಸ್ ಕೊಟ್ಟ ಪ್ರತ್ಯುತ್ತರ ಬೇರೆಯದೇ ಕತೆ ಹೇಳ್ತಾ ಇದೆ. ರಾಜಸ್ಥಾನದ(Rajasthan) ಬನ್ಸ್ವಾರದಲ್ಲಿ ಬಿಜೆಪಿ(BJP) ಚುನಾವಣಾ ಸಮಾವೇಶ ನಡೀತಿತ್ತು. ಪ್ರಧಾನಿ ಮೋದಿ ಅವರು ವೇದಿಕೆ ಮೇಲೆ ನಿಂತು ಮಾತಾಡ್ತಾ ಇದ್ರು. ಮಾತಿನ ಮೂಲಕ, ಕಾಂಗ್ರೆಸ್ ಪ್ರಣಾಳಿಕೆಗೆ ಟಕ್ಕರ್ ಕೊಟ್ಟಿದ್ರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ ಅದೊಂದು ವಿಚಾರವನ್ನೇ ಅಸ್ತ್ರವಾಗಿಟ್ಕೊಂಡು, ಎದುರಾಳಿ ಪಾಳಯದ ವಿರುದ್ಧ ಸಿಡಿದೆದ್ದಿದ್ರು. ಕಾಂಗ್ರೆಸ್ ಪಾಳಯ ಮ್ಯಾನಿಫೆಸ್ಟೋ ಮುಂದಿಟ್ಟು ಅಖಾಡ ಪ್ರವೇಶ ಮಾಡ್ತಿದ್ದ ಹಾಗೇ, ಬಿಜೆಪಿ ಅಟ್ಯಾಕಿಂಗ್ ಮೋಡ್‌ಗೆ ಬಂದಾಗಿತ್ತು. ಕಾಂಗ್ರೆಸ್ ವಿರುದ್ಧ ಗುಡುಗೋಕೆ ಆರಂಭಿಸಿತ್ತು. ಕರ್ನಾಟಕದಲ್ಲಿ ಅದೃಷ್ಟ ಖುಲಾಯಿಸಿದ ಗ್ಯಾರಂಟಿನೇ ತನ್ನ ಬತ್ತಳಿಕೆಯ ಬ್ರಹ್ಮಾಸ್ತ್ರ ಅನ್ನೋ ಹಾಗೆ ಕಾಂಗ್ರೆಸ್ ಬಳಸಿತ್ತು. ಕಾಂಗ್ರೆಸ್ ಸಂಪತ್ತಿನ ಸರ್ವೆ ಮಾಡಿದ್ರೆ, ಅದರಲ್ಲಿ ಮಂಗಳಸೂತ್ರವೂ ಸೇರಿಕೊಂಡಿರುತ್ತೆ. ಅದನ್ನೂ ಕೂಡ ರಿಡಿಸ್ಟ್ರಿಬ್ಯೂಟ್ ಮಾಡ್ಬಿಡುತ್ತೆ ಕಾಂಗ್ರೆಸ್ ಅಂದ್ರು ಮೋದಿ. ಅಂದ್ ಹಾಗೆ, ಈ ಸಂಪತ್ತು ಹಂಚಿಕೆಯಾದ್ರೆ, ಬಂಗಾರ ಯಾರ ಪಾಲಾಗುತ್ತೆ ಅಂತ ಹೇಳುವಾಗ ಹೇಳಿದ ಮಾತೇ, ದೇಶದಲ್ಲಿ ದೊಡ್ಡ ಹಲ್ ಚಲ್ ಸೃಷ್ಟಿಸಿರೋದು.

ಇದನ್ನೂ ವೀಕ್ಷಿಸಿ:  Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more