2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

Published : Aug 08, 2021, 01:22 PM ISTUpdated : Aug 08, 2021, 02:01 PM IST

125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ನವದೆಹಲಿ(ಆ.08): 125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸಿದ ಕಟ್ಟಕಡೆಯ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ, ದೇಶಕ್ಕೆ ಮೊದಲ ಚಿನ್ನದ ಪದಕದ ಹಿರಿಮೆ ತಂದುಕೊಟ್ಟಿದ್ದಾರೆ. ತನ್ಮೂಲಕ, ಭಾರತದ 135 ಕೋಟಿ ಜನತೆ ಉಲ್ಲಾಸದಿಂದ ಸಂಭ್ರಮಿಸುವಂತೆ ಮಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್‌ ಹುದ್ದೆಯಲ್ಲಿರುವ ನೀರಜ್‌ ಸಾಧನೆಯನ್ನು ಇಡೀ ದೇಶ ಮನದಣಿಯೆ ಕೊಂಡಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ 2013ರಲ್ಲಿ ಮಾಡಿದ್ದ ಭಾಷಣವೊಂದರ ವಿಡಿಯೋ ತುಣುಕು ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋದಿಯವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾ ಕ್ರೀಡೆಯನ್ನು ಶಿಕ್ಷಣ ವ್ಯವಸ್ಥೆ ಜೊತೆ ಗಂಭೀರವಾಗಿ ಪರಿಗಣಿಸಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಯೋಧರನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆಯೂ ಮಾತನಾಡಿರುವ ಅವರು, ಭಾರತೀಯ ಯೋಧರಿಗೆ ಸೂಕ್ತ ತರಬೇತಿ ಕೊಟ್ಟರೆ ಪದಕಗಳು ನಮ್ಮದೇ ಎಂದಿದ್ದಾರೆ. ಅವರು ಅಂದು ನುಡಿದಿದ್ದ ಮಾತುಗಳು ಇಂದು ನೀರಜ್ ಚೋಪ್ರಾ ಸಾಧನೆಯಿಂದ ನಿಜವಾಗಿವೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!