2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

Published : Aug 08, 2021, 01:22 PM ISTUpdated : Aug 08, 2021, 02:01 PM IST

125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ನವದೆಹಲಿ(ಆ.08): 125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸಿದ ಕಟ್ಟಕಡೆಯ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ, ದೇಶಕ್ಕೆ ಮೊದಲ ಚಿನ್ನದ ಪದಕದ ಹಿರಿಮೆ ತಂದುಕೊಟ್ಟಿದ್ದಾರೆ. ತನ್ಮೂಲಕ, ಭಾರತದ 135 ಕೋಟಿ ಜನತೆ ಉಲ್ಲಾಸದಿಂದ ಸಂಭ್ರಮಿಸುವಂತೆ ಮಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್‌ ಹುದ್ದೆಯಲ್ಲಿರುವ ನೀರಜ್‌ ಸಾಧನೆಯನ್ನು ಇಡೀ ದೇಶ ಮನದಣಿಯೆ ಕೊಂಡಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ 2013ರಲ್ಲಿ ಮಾಡಿದ್ದ ಭಾಷಣವೊಂದರ ವಿಡಿಯೋ ತುಣುಕು ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋದಿಯವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾ ಕ್ರೀಡೆಯನ್ನು ಶಿಕ್ಷಣ ವ್ಯವಸ್ಥೆ ಜೊತೆ ಗಂಭೀರವಾಗಿ ಪರಿಗಣಿಸಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಯೋಧರನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆಯೂ ಮಾತನಾಡಿರುವ ಅವರು, ಭಾರತೀಯ ಯೋಧರಿಗೆ ಸೂಕ್ತ ತರಬೇತಿ ಕೊಟ್ಟರೆ ಪದಕಗಳು ನಮ್ಮದೇ ಎಂದಿದ್ದಾರೆ. ಅವರು ಅಂದು ನುಡಿದಿದ್ದ ಮಾತುಗಳು ಇಂದು ನೀರಜ್ ಚೋಪ್ರಾ ಸಾಧನೆಯಿಂದ ನಿಜವಾಗಿವೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್