2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

Published : Aug 08, 2021, 01:22 PM ISTUpdated : Aug 08, 2021, 02:01 PM IST

125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ನವದೆಹಲಿ(ಆ.08): 125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸಿದ ಕಟ್ಟಕಡೆಯ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ, ದೇಶಕ್ಕೆ ಮೊದಲ ಚಿನ್ನದ ಪದಕದ ಹಿರಿಮೆ ತಂದುಕೊಟ್ಟಿದ್ದಾರೆ. ತನ್ಮೂಲಕ, ಭಾರತದ 135 ಕೋಟಿ ಜನತೆ ಉಲ್ಲಾಸದಿಂದ ಸಂಭ್ರಮಿಸುವಂತೆ ಮಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್‌ ಹುದ್ದೆಯಲ್ಲಿರುವ ನೀರಜ್‌ ಸಾಧನೆಯನ್ನು ಇಡೀ ದೇಶ ಮನದಣಿಯೆ ಕೊಂಡಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ 2013ರಲ್ಲಿ ಮಾಡಿದ್ದ ಭಾಷಣವೊಂದರ ವಿಡಿಯೋ ತುಣುಕು ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋದಿಯವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾ ಕ್ರೀಡೆಯನ್ನು ಶಿಕ್ಷಣ ವ್ಯವಸ್ಥೆ ಜೊತೆ ಗಂಭೀರವಾಗಿ ಪರಿಗಣಿಸಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಯೋಧರನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆಯೂ ಮಾತನಾಡಿರುವ ಅವರು, ಭಾರತೀಯ ಯೋಧರಿಗೆ ಸೂಕ್ತ ತರಬೇತಿ ಕೊಟ್ಟರೆ ಪದಕಗಳು ನಮ್ಮದೇ ಎಂದಿದ್ದಾರೆ. ಅವರು ಅಂದು ನುಡಿದಿದ್ದ ಮಾತುಗಳು ಇಂದು ನೀರಜ್ ಚೋಪ್ರಾ ಸಾಧನೆಯಿಂದ ನಿಜವಾಗಿವೆ. 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!