2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

Published : Aug 08, 2021, 01:22 PM ISTUpdated : Aug 08, 2021, 02:01 PM IST

125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ನವದೆಹಲಿ(ಆ.08): 125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸಿದ ಕಟ್ಟಕಡೆಯ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ, ದೇಶಕ್ಕೆ ಮೊದಲ ಚಿನ್ನದ ಪದಕದ ಹಿರಿಮೆ ತಂದುಕೊಟ್ಟಿದ್ದಾರೆ. ತನ್ಮೂಲಕ, ಭಾರತದ 135 ಕೋಟಿ ಜನತೆ ಉಲ್ಲಾಸದಿಂದ ಸಂಭ್ರಮಿಸುವಂತೆ ಮಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್‌ ಹುದ್ದೆಯಲ್ಲಿರುವ ನೀರಜ್‌ ಸಾಧನೆಯನ್ನು ಇಡೀ ದೇಶ ಮನದಣಿಯೆ ಕೊಂಡಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ 2013ರಲ್ಲಿ ಮಾಡಿದ್ದ ಭಾಷಣವೊಂದರ ವಿಡಿಯೋ ತುಣುಕು ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋದಿಯವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾ ಕ್ರೀಡೆಯನ್ನು ಶಿಕ್ಷಣ ವ್ಯವಸ್ಥೆ ಜೊತೆ ಗಂಭೀರವಾಗಿ ಪರಿಗಣಿಸಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಯೋಧರನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆಯೂ ಮಾತನಾಡಿರುವ ಅವರು, ಭಾರತೀಯ ಯೋಧರಿಗೆ ಸೂಕ್ತ ತರಬೇತಿ ಕೊಟ್ಟರೆ ಪದಕಗಳು ನಮ್ಮದೇ ಎಂದಿದ್ದಾರೆ. ಅವರು ಅಂದು ನುಡಿದಿದ್ದ ಮಾತುಗಳು ಇಂದು ನೀರಜ್ ಚೋಪ್ರಾ ಸಾಧನೆಯಿಂದ ನಿಜವಾಗಿವೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!