2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

Published : Aug 08, 2021, 01:22 PM ISTUpdated : Aug 08, 2021, 02:01 PM IST

125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ನವದೆಹಲಿ(ಆ.08): 125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸಿದ ಕಟ್ಟಕಡೆಯ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ, ದೇಶಕ್ಕೆ ಮೊದಲ ಚಿನ್ನದ ಪದಕದ ಹಿರಿಮೆ ತಂದುಕೊಟ್ಟಿದ್ದಾರೆ. ತನ್ಮೂಲಕ, ಭಾರತದ 135 ಕೋಟಿ ಜನತೆ ಉಲ್ಲಾಸದಿಂದ ಸಂಭ್ರಮಿಸುವಂತೆ ಮಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್‌ ಹುದ್ದೆಯಲ್ಲಿರುವ ನೀರಜ್‌ ಸಾಧನೆಯನ್ನು ಇಡೀ ದೇಶ ಮನದಣಿಯೆ ಕೊಂಡಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ 2013ರಲ್ಲಿ ಮಾಡಿದ್ದ ಭಾಷಣವೊಂದರ ವಿಡಿಯೋ ತುಣುಕು ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋದಿಯವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾ ಕ್ರೀಡೆಯನ್ನು ಶಿಕ್ಷಣ ವ್ಯವಸ್ಥೆ ಜೊತೆ ಗಂಭೀರವಾಗಿ ಪರಿಗಣಿಸಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಯೋಧರನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆಯೂ ಮಾತನಾಡಿರುವ ಅವರು, ಭಾರತೀಯ ಯೋಧರಿಗೆ ಸೂಕ್ತ ತರಬೇತಿ ಕೊಟ್ಟರೆ ಪದಕಗಳು ನಮ್ಮದೇ ಎಂದಿದ್ದಾರೆ. ಅವರು ಅಂದು ನುಡಿದಿದ್ದ ಮಾತುಗಳು ಇಂದು ನೀರಜ್ ಚೋಪ್ರಾ ಸಾಧನೆಯಿಂದ ನಿಜವಾಗಿವೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?