2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

2013ರಲ್ಲೇ ಒಲಿಂಪಿಕ್ಸ್ ಭವಿಷ್ಯ ನುಡಿದಿದ್ದ ಮೋದಿ: ಸಾಕಾರಗೊಳಿಸಿದ ನೀರಜ್ ಚೋಪ್ರಾ!

Published : Aug 08, 2021, 01:22 PM ISTUpdated : Aug 08, 2021, 02:01 PM IST

125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ನವದೆಹಲಿ(ಆ.08): 125 ವರ್ಷಗಳ ಇತಿಹಾಸವಿರುವ ಒಲಿಂಪಿಕ್ಸ್‌ನಲ್ಲಿ ಭಾರತ ಹೊಸ ಮೈಲಿಗಲ್ಲು ನೆಟ್ಟಿದೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಚಿನ್ನಕ್ಕೆ ಮುತ್ತಿಕ್ಕುವ ಮೂಲಕ ‘ಶತಮಾನದ ಸಾಧನೆ’ ಮಾಡಿದೆ. ನೀರಜ್‌ ಚೋಪ್ರಾ ಎಂಬ 23 ವರ್ಷದ ‘ವೀರ ಯೋಧ’ ಜಾವೆಲಿನ್‌ ಥ್ರೋ (ಭರ್ಜಿ ಎಸೆತ) ವಿಭಾಗದಲ್ಲಿ ಜಾಗತಿಕ ಸ್ಪರ್ಧಿಗಳನ್ನು ಹಿಂದಿಕ್ಕಿ ಬಂಗಾರ ಬೇಟೆಯಾಡಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರತಿನಿಧಿಸಿದ ಕಟ್ಟಕಡೆಯ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ, ದೇಶಕ್ಕೆ ಮೊದಲ ಚಿನ್ನದ ಪದಕದ ಹಿರಿಮೆ ತಂದುಕೊಟ್ಟಿದ್ದಾರೆ. ತನ್ಮೂಲಕ, ಭಾರತದ 135 ಕೋಟಿ ಜನತೆ ಉಲ್ಲಾಸದಿಂದ ಸಂಭ್ರಮಿಸುವಂತೆ ಮಾಡಿದ್ದಾರೆ. ಭಾರತೀಯ ಸೇನೆಯಲ್ಲಿ ಸುಬೇದಾರ್‌ ಹುದ್ದೆಯಲ್ಲಿರುವ ನೀರಜ್‌ ಸಾಧನೆಯನ್ನು ಇಡೀ ದೇಶ ಮನದಣಿಯೆ ಕೊಂಡಾಡಿದೆ.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ 2013ರಲ್ಲಿ ಮಾಡಿದ್ದ ಭಾಷಣವೊಂದರ ವಿಡಿಯೋ ತುಣುಕು ಭಾರೀ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮೋದಿಯವರು ಒಲಿಂಪಿಕ್ಸ್ ಬಗ್ಗೆ ಮಾತನಾಡುತ್ತಾ ಕ್ರೀಡೆಯನ್ನು ಶಿಕ್ಷಣ ವ್ಯವಸ್ಥೆ ಜೊತೆ ಗಂಭೀರವಾಗಿ ಪರಿಗಣಿಸಿದ್ದೇವಾ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಯೋಧರನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆಯೂ ಮಾತನಾಡಿರುವ ಅವರು, ಭಾರತೀಯ ಯೋಧರಿಗೆ ಸೂಕ್ತ ತರಬೇತಿ ಕೊಟ್ಟರೆ ಪದಕಗಳು ನಮ್ಮದೇ ಎಂದಿದ್ದಾರೆ. ಅವರು ಅಂದು ನುಡಿದಿದ್ದ ಮಾತುಗಳು ಇಂದು ನೀರಜ್ ಚೋಪ್ರಾ ಸಾಧನೆಯಿಂದ ನಿಜವಾಗಿವೆ. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?