News Hour: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

News Hour: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

Published : Jul 12, 2022, 10:34 PM IST

National Emblem Row: ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. 

ನವದೆಹಲಿ (ಜು. 12): ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಅನ್ನೋದು ವಿಪಕ್ಷಗಳ ಪ್ರಮುಖ ಆರೋಪ. ಸಾಮಾನ್ಯವಾಗಿ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳು ಸೌಮ್ಯ ಸಂದೇಶ ಸಾರುತ್ತವೆ. ಆದರೆ ಈ ಹೊಸ ಶಿಲ್ಪದಲ್ಲಿ ‘ನರಭಕ್ಷಕ ಪ್ರವೃತ್ತಿ’ ರೀತಿಯಲ್ಲಿ ಬಿಂಬಿಸಲಾಗಿದೆ. ಸಾಮಾನ್ಯ ಲಾಂಛನದಲ್ಲಿ ಸಿಂಹದ ಹಲ್ಲುಗಳು ಕಾಣಿಸಲ್ಲ. ಆದ್ರಿಲ್ಲಿ ಸಿಂಹದ ಹಲ್ಲುಗಳು ಕಾಣಿಸುತ್ತಿವೆ ಎಂದು ಆರ್ಜೆಡಿ ಸೇರಿ ವಿಪಕ್ಷಗಳು ಆರೋಪಿಸಿವೆ. ಅಷ್ಟು ಮಾತ್ರವಲ್ಲ ಕಾರ್ಯಾಂಗದ ಮುಖ್ಯಸ್ಥರಾಗಿರುವ ಪ್ರಧಾನಿ, ಈ ಲಾಂಛನ ಅನಾವರಣ ಮಾಡಿದ್ದು ಎಷ್ಟು ಸರಿ ಅನ್ನೋ ಪ್ರಶ್ನೆಯನ್ನೂ ಹಾಕಿದ್ದಾರೆ.

ಮೂಲ ರಾಷ್ಟ್ರೀಯ ಲಾಂಛನದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸಂಸತ್ ಮೇಲಿರುವುದು 3D ಮಾದರಿಯ ಲಾಂಛನ. ಇದಕ್ಕೆ 2D ಫೋಟೋ ಮೂಲಕ ಹೋಲಿಕೆ ಮಾಡಲಾಗುತ್ತಿದೆಯಷ್ಟೇ. ಸಾರನಾಥದಲ್ಲಿನ ಮೂಲ ಮಾದರಿಯಂತೆ ಲಾಂಛನ ರಚನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ ಬಿಜೆಪಿ, ಮೋದಿ ಈ ಲಾಂಛನ ಬಿಡುಗಡೆ ಮಾಡಿದ್ದೇಕೆ ಅನ್ನೋದಕ್ಕೂ ಸ್ಪಷ್ಟನೆ ಕೊಟ್ಟಿದೆ.

ಇದನ್ನೂ ನೋಡಿ: ಹೊಸ ಸಂಸತ್‌ ಭವನದ ಮೇಲೆ ರಾರಾಜಿಸಲಿದೆ ರಾಷ್ಟ್ರೀಯ ಲಾಂಛನ, ಪ್ರಧಾನಿಯಿಂದ ಅನಾವರಣ

ನೂತನ ಸಂಸತ್ ಭವನ ಶಂಕುಸ್ಥಾಪನೆ ಮಾಡಿದವರೂ ಪ್ರಧಾನಿಗಳೇ, ಈಗ ಲಾಛಂನವನ್ನೂ ಅವರೇ ಉದ್ಘಾಟಿಸಿದ್ದಾರೆ. ಈ ವೇಳೆ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತರಿದ್ದರು. ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ಸಂಸತ್ ನಿರ್ಮಾಣ ಮಾಡಲಾಗುತ್ತಿದೆ. 

ಕಟ್ಟಡ ಪೂರ್ಣವಾದ ಬಳಿಕ ಸಂಸತ್ ಆಡಳಿತಕ್ಕೆ ಕಟ್ಟಡ ಹಸ್ತಾಂತರಿಸಲಾಗುತ್ತೆ. ಆದರೆ ವಿರೋಧಪಕ್ಷಗಳು ರಾಜಕೀಯ ಕಾರಣಕ್ಕೆ ಟೀಕೆ ಮಾಡುತ್ತಿವೆ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ ಬಿಜೆಪಿ ಏನೇ ಸ್ಪಷ್ಟನೆ ನೀಡಿದರು ವಿಪಕ್ಷಗಳು ಒಪ್ಪುತ್ತಿಲ್ಲ. ಮೂಲ ರಾಷ್ಟ್ರ ಲಾಂಛನದ ಜೊತೆಗೆ ನೂತನ ಲಾಂಛನದ ಫೋಟೋ ಹಾಕಿ ವಿವಾದವನ್ನು ದೊಡ್ಡದು ಮಾಡುತ್ತಾ ರಾಜಕೀಯಕ್ಕೆ ಇಳಿದಿವೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more