News Hour: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

News Hour: ಹೊಸ ಸಂಸತ್ತಿನ ನೆತ್ತಿಯಲ್ಲಿ ಸಿಂಹ ಘರ್ಜನೆ: ಮೂಲ ಲಾಂಛನ ವಿರೂಪಗೊಳಿಸಿತಾ ಮೋದಿ ಸರ್ಕಾರ?

Published : Jul 12, 2022, 10:34 PM IST

National Emblem Row: ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. 

ನವದೆಹಲಿ (ಜು. 12): ನೂತನ ಸಂಸತ್ ಭವನಕ್ಕೆ ಕಿರೀಟ ಎನ್ನುವಂತೆ ನಿನ್ನೆಯಷ್ಟೇ ಕಂಚಿನ ರಾಷ್ಟ್ರ ಲಾಂಛನವನ್ನ ಪ್ರಧಾನಿ ಮೋದಿ ಅನಾವರಣ ಗೊಳಿಸಿದ್ದರು. ರಾಷ್ಟ್ರೀಯ ಲಾಂಛನವನ್ನು ಮಾರ್ಪಡಿಸಲಾಗಿದೆ ಮತ್ತು ಅವಮಾನಿಸಲಾಗಿದೆ ಅನ್ನೋದು ವಿಪಕ್ಷಗಳ ಪ್ರಮುಖ ಆರೋಪ. ಸಾಮಾನ್ಯವಾಗಿ ರಾಷ್ಟ್ರ ಲಾಂಛನದಲ್ಲಿರುವ ಸಿಂಹಗಳು ಸೌಮ್ಯ ಸಂದೇಶ ಸಾರುತ್ತವೆ. ಆದರೆ ಈ ಹೊಸ ಶಿಲ್ಪದಲ್ಲಿ ‘ನರಭಕ್ಷಕ ಪ್ರವೃತ್ತಿ’ ರೀತಿಯಲ್ಲಿ ಬಿಂಬಿಸಲಾಗಿದೆ. ಸಾಮಾನ್ಯ ಲಾಂಛನದಲ್ಲಿ ಸಿಂಹದ ಹಲ್ಲುಗಳು ಕಾಣಿಸಲ್ಲ. ಆದ್ರಿಲ್ಲಿ ಸಿಂಹದ ಹಲ್ಲುಗಳು ಕಾಣಿಸುತ್ತಿವೆ ಎಂದು ಆರ್ಜೆಡಿ ಸೇರಿ ವಿಪಕ್ಷಗಳು ಆರೋಪಿಸಿವೆ. ಅಷ್ಟು ಮಾತ್ರವಲ್ಲ ಕಾರ್ಯಾಂಗದ ಮುಖ್ಯಸ್ಥರಾಗಿರುವ ಪ್ರಧಾನಿ, ಈ ಲಾಂಛನ ಅನಾವರಣ ಮಾಡಿದ್ದು ಎಷ್ಟು ಸರಿ ಅನ್ನೋ ಪ್ರಶ್ನೆಯನ್ನೂ ಹಾಕಿದ್ದಾರೆ.

ಮೂಲ ರಾಷ್ಟ್ರೀಯ ಲಾಂಛನದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸಂಸತ್ ಮೇಲಿರುವುದು 3D ಮಾದರಿಯ ಲಾಂಛನ. ಇದಕ್ಕೆ 2D ಫೋಟೋ ಮೂಲಕ ಹೋಲಿಕೆ ಮಾಡಲಾಗುತ್ತಿದೆಯಷ್ಟೇ. ಸಾರನಾಥದಲ್ಲಿನ ಮೂಲ ಮಾದರಿಯಂತೆ ಲಾಂಛನ ರಚನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ ಬಿಜೆಪಿ, ಮೋದಿ ಈ ಲಾಂಛನ ಬಿಡುಗಡೆ ಮಾಡಿದ್ದೇಕೆ ಅನ್ನೋದಕ್ಕೂ ಸ್ಪಷ್ಟನೆ ಕೊಟ್ಟಿದೆ.

ಇದನ್ನೂ ನೋಡಿ: ಹೊಸ ಸಂಸತ್‌ ಭವನದ ಮೇಲೆ ರಾರಾಜಿಸಲಿದೆ ರಾಷ್ಟ್ರೀಯ ಲಾಂಛನ, ಪ್ರಧಾನಿಯಿಂದ ಅನಾವರಣ

ನೂತನ ಸಂಸತ್ ಭವನ ಶಂಕುಸ್ಥಾಪನೆ ಮಾಡಿದವರೂ ಪ್ರಧಾನಿಗಳೇ, ಈಗ ಲಾಛಂನವನ್ನೂ ಅವರೇ ಉದ್ಘಾಟಿಸಿದ್ದಾರೆ. ಈ ವೇಳೆ ಸ್ಪೀಕರ್ ಓಂ ಬಿರ್ಲಾ ಉಪಸ್ಥಿತರಿದ್ದರು. ಕೇಂದ್ರ ನಗರಾಭಿವೃದ್ಧಿ ಇಲಾಖೆಯಿಂದ ಸಂಸತ್ ನಿರ್ಮಾಣ ಮಾಡಲಾಗುತ್ತಿದೆ. 

ಕಟ್ಟಡ ಪೂರ್ಣವಾದ ಬಳಿಕ ಸಂಸತ್ ಆಡಳಿತಕ್ಕೆ ಕಟ್ಟಡ ಹಸ್ತಾಂತರಿಸಲಾಗುತ್ತೆ. ಆದರೆ ವಿರೋಧಪಕ್ಷಗಳು ರಾಜಕೀಯ ಕಾರಣಕ್ಕೆ ಟೀಕೆ ಮಾಡುತ್ತಿವೆ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ ಬಿಜೆಪಿ ಏನೇ ಸ್ಪಷ್ಟನೆ ನೀಡಿದರು ವಿಪಕ್ಷಗಳು ಒಪ್ಪುತ್ತಿಲ್ಲ. ಮೂಲ ರಾಷ್ಟ್ರ ಲಾಂಛನದ ಜೊತೆಗೆ ನೂತನ ಲಾಂಛನದ ಫೋಟೋ ಹಾಕಿ ವಿವಾದವನ್ನು ದೊಡ್ಡದು ಮಾಡುತ್ತಾ ರಾಜಕೀಯಕ್ಕೆ ಇಳಿದಿವೆ. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more