News Hour: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:  ನಾಳೆಯ ವಿಚಾರಣೆಗೆ ವಿನಾಯಿತಿ ಕೇಳಿದ ರಾಹುಲ್‌ ಗಾಂಧಿ

News Hour: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ನಾಳೆಯ ವಿಚಾರಣೆಗೆ ವಿನಾಯಿತಿ ಕೇಳಿದ ರಾಹುಲ್‌ ಗಾಂಧಿ

Published : Jun 16, 2022, 11:09 PM IST

ಸೋಮವಾರದಿಂದ ಸತತ ಮೂರು ದಿನಗಳ ವಿಚಾರಣೆಗೆ ಗುರಿಯಾಗಿದ್ದ ರಾಹುಲ್‌, ಗುರುವಾರ ವಿರಾಮ ಕೋರಿದ್ದರು

ನವದೆಹಲಿ (ಜೂ. 16): ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಶುಕ್ರವಾರ ನಡೆಯಬೇಕಿದ್ದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ. ಸೋಮವಾರದಿಂದ ಸತತ ಮೂರು ದಿನಗಳ ವಿಚಾರಣೆಗೆ ಗುರಿಯಾಗಿದ್ದ ರಾಹುಲ್‌, ಗುರುವಾರ ವಿರಾಮ ಕೋರಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬರುವಂತೆ ರಾಹುಲ್‌ಗೆ ಸೂಚಿಸಲಾಗಿತ್ತು.

ಆದರೆ ಕೋವಿಡ್‌ ಬಳಿಕದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ತಾಯಿ ಸೋನಿಯಾ ಆರೈಕೆಗೆ ತೆರಳಬೇಕಿರುವ ಕಾರಣ ಶುಕ್ರವಾರದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ರಾಹುಲ್‌ ಗುರುವಾರ ಇಡಿಗೆ ಪತ್ರ ಬರೆದಿದ್ದಾರೆ. ಅವರು ಪತ್ರದ ಮೂಲಕ ಸಲ್ಲಿಸಿದ ಮನವಿಗೆ ಇಡಿ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೋವಿಡ್‌ ನಂತರದ ಕಾಯಿಲೆಯಿಂದ ಬಳಲುತ್ತಿರುವ ಸೋನಿಯಾ ದೆಹಲಿಯ ಗಂಗಾರಾಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೂ.23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅವರಿಗೆ ಸೂಚನೆ ನೀಡಿದೆ.

ಇದನ್ನೂ ನೋಡಿ: ನೂಪುರ್ ಹೇಳಿಕೆ ಖಂಡಿಸಿ 10 ರಾಜ್ಯಗಳಲ್ಲಿ ಹಿಂಸಾಚಾರ,ರಾಜ್ಯದಲ್ಲಿ ಭದ್ರತೆ ಹೆಚ್ಚಳ!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more