News Hour: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:  ನಾಳೆಯ ವಿಚಾರಣೆಗೆ ವಿನಾಯಿತಿ ಕೇಳಿದ ರಾಹುಲ್‌ ಗಾಂಧಿ

News Hour: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ನಾಳೆಯ ವಿಚಾರಣೆಗೆ ವಿನಾಯಿತಿ ಕೇಳಿದ ರಾಹುಲ್‌ ಗಾಂಧಿ

Published : Jun 16, 2022, 11:09 PM IST

ಸೋಮವಾರದಿಂದ ಸತತ ಮೂರು ದಿನಗಳ ವಿಚಾರಣೆಗೆ ಗುರಿಯಾಗಿದ್ದ ರಾಹುಲ್‌, ಗುರುವಾರ ವಿರಾಮ ಕೋರಿದ್ದರು

ನವದೆಹಲಿ (ಜೂ. 16): ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಶುಕ್ರವಾರ ನಡೆಯಬೇಕಿದ್ದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಾರಿ ನಿರ್ದೇಶನಾಲಯಕ್ಕೆ ಮನವಿ ಮಾಡಿದ್ದಾರೆ. ಸೋಮವಾರದಿಂದ ಸತತ ಮೂರು ದಿನಗಳ ವಿಚಾರಣೆಗೆ ಗುರಿಯಾಗಿದ್ದ ರಾಹುಲ್‌, ಗುರುವಾರ ವಿರಾಮ ಕೋರಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬರುವಂತೆ ರಾಹುಲ್‌ಗೆ ಸೂಚಿಸಲಾಗಿತ್ತು.

ಆದರೆ ಕೋವಿಡ್‌ ಬಳಿಕದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ತಾಯಿ ಸೋನಿಯಾ ಆರೈಕೆಗೆ ತೆರಳಬೇಕಿರುವ ಕಾರಣ ಶುಕ್ರವಾರದ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ರಾಹುಲ್‌ ಗುರುವಾರ ಇಡಿಗೆ ಪತ್ರ ಬರೆದಿದ್ದಾರೆ. ಅವರು ಪತ್ರದ ಮೂಲಕ ಸಲ್ಲಿಸಿದ ಮನವಿಗೆ ಇಡಿ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೋವಿಡ್‌ ನಂತರದ ಕಾಯಿಲೆಯಿಂದ ಬಳಲುತ್ತಿರುವ ಸೋನಿಯಾ ದೆಹಲಿಯ ಗಂಗಾರಾಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೂ.23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅವರಿಗೆ ಸೂಚನೆ ನೀಡಿದೆ.

ಇದನ್ನೂ ನೋಡಿ: ನೂಪುರ್ ಹೇಳಿಕೆ ಖಂಡಿಸಿ 10 ರಾಜ್ಯಗಳಲ್ಲಿ ಹಿಂಸಾಚಾರ,ರಾಜ್ಯದಲ್ಲಿ ಭದ್ರತೆ ಹೆಚ್ಚಳ!

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more