Omicron variant: ಭಾರತದಲ್ಲಿ ತಲ್ಲಣ,  ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

Omicron variant: ಭಾರತದಲ್ಲಿ ತಲ್ಲಣ, ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

Published : Nov 28, 2021, 01:32 PM ISTUpdated : Nov 28, 2021, 01:37 PM IST

ಡೆಲ್ಟಾ ವೈರಸ್‌ಗಿಂತಲೂ ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್‌) ಕೋವಿಡ್‌ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ. 

ನವದೆಹಲಿ (ನ. 28): ಡೆಲ್ಟಾ ವೈರಸ್‌ಗಿಂತಲೂ (Delta Variant) ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್‌) ಕೋವಿಡ್‌ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ. 

ಈ ಹಿನ್ನೆಲೆಯಲ್ಲಿ ತಕ್ಷಣವೇ ಮುಂಜಾಗ್ರತಾ ಕ್ರಮ ಜರುಗಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, (PM Modi) ‘ಈ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕು. ವಿದೇಶದಿಂದ ಬರುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಬೇಕು. ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಪುನಾರಂಭ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮಹತ್ವದ ಸೂಚನೆ ನೀಡಿದ್ದಾರೆ. ‘ಒಮಿಕ್ರೋನ್‌’ ಸೇರಿ ವಿವಿಧ ಕೋವಿಡ್‌ ತಳಿಗಳು ತಾಂಡವವಾಡುತ್ತಿರುವ 12 ‘ಹೈರಿಸ್ಕ್‌’ ದೇಶಗಳಿಂದ ಬಂದವರ ಮೇಲೆ ನಿಗಾಗೆ ಕೇಂದ್ರ ನಿರ್ಧರಿಸಿದೆ.  ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಜಿಂಬಾಬ್ವೆ, ಸಿಂಗಾಪುರ, ಹಾಂಕಾಂಗ್‌, ಇಸ್ರೇಲ್‌ ಹಾಗೂ ಬ್ರಿಟನ್‌ ಸೇರಿದಂತೆ ಐರೋಪ್ಯ ಒಕ್ಕೂಟವನ್ನು ಭಾರತ ‘ಹೈ ರಿಸ್ಕ್‌’ ದೇಶಗಳು ಎಂದು ಪಟ್ಟಿಮಾಡಿದೆ. ಈ ದೇಶಗಳಿಂದ ಕಳೆದ 2 ವಾರಗಳಿಂದ ಬಂದವರ ಮೇಲೆ ನಿಗಾ ಇಡಲಾಗುತ್ತದೆ. 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?