Omicron variant: ಭಾರತದಲ್ಲಿ ತಲ್ಲಣ,  ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

Omicron variant: ಭಾರತದಲ್ಲಿ ತಲ್ಲಣ, ವಿದೇಶದಿಂದ ಬಂದವರ ಮೇಲೆ ನಿಗಾ ವಹಿಸಲು ಮೋದಿ ಸೂಚನೆ

Published : Nov 28, 2021, 01:32 PM ISTUpdated : Nov 28, 2021, 01:37 PM IST

ಡೆಲ್ಟಾ ವೈರಸ್‌ಗಿಂತಲೂ ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್‌) ಕೋವಿಡ್‌ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ. 

ನವದೆಹಲಿ (ನ. 28): ಡೆಲ್ಟಾ ವೈರಸ್‌ಗಿಂತಲೂ (Delta Variant) ಅತ್ಯಂತ ಅಪಾಯಕಾರಿಯಾದ, ವೇಗವಾಗಿ ಹಬ್ಬುವ ಹಾಗೂ ಯಾವುದೇ ಲಸಿಕೆಗೂ ಬಗ್ಗದ ‘ಬೋಟ್ಸ್‌ವಾನಾ’ (ಒಮಿಕ್ರೋನ್‌) ಕೋವಿಡ್‌ ರೂಪಾಂತರಿ ಬಗ್ಗೆ (Omicron variant) ಭಾರತದಲ್ಲೂ ತಲ್ಲಣ ಕಾಣಿಸಿಕೊಂಡಿದೆ. 

ಈ ಹಿನ್ನೆಲೆಯಲ್ಲಿ ತಕ್ಷಣವೇ ಮುಂಜಾಗ್ರತಾ ಕ್ರಮ ಜರುಗಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, (PM Modi) ‘ಈ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಡಬೇಕು. ವಿದೇಶದಿಂದ ಬರುವವರ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಬೇಕು. ಅಂತಾರಾಷ್ಟ್ರೀಯ ವಿಮಾನ ಪ್ರಯಾಣ ಪುನಾರಂಭ ನಿರ್ಧಾರವನ್ನು ಮರುಪರಿಶೀಲಿಸಬೇಕು’ ಎಂದು ಮಹತ್ವದ ಸೂಚನೆ ನೀಡಿದ್ದಾರೆ. ‘ಒಮಿಕ್ರೋನ್‌’ ಸೇರಿ ವಿವಿಧ ಕೋವಿಡ್‌ ತಳಿಗಳು ತಾಂಡವವಾಡುತ್ತಿರುವ 12 ‘ಹೈರಿಸ್ಕ್‌’ ದೇಶಗಳಿಂದ ಬಂದವರ ಮೇಲೆ ನಿಗಾಗೆ ಕೇಂದ್ರ ನಿರ್ಧರಿಸಿದೆ.  ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಜಿಂಬಾಬ್ವೆ, ಸಿಂಗಾಪುರ, ಹಾಂಕಾಂಗ್‌, ಇಸ್ರೇಲ್‌ ಹಾಗೂ ಬ್ರಿಟನ್‌ ಸೇರಿದಂತೆ ಐರೋಪ್ಯ ಒಕ್ಕೂಟವನ್ನು ಭಾರತ ‘ಹೈ ರಿಸ್ಕ್‌’ ದೇಶಗಳು ಎಂದು ಪಟ್ಟಿಮಾಡಿದೆ. ಈ ದೇಶಗಳಿಂದ ಕಳೆದ 2 ವಾರಗಳಿಂದ ಬಂದವರ ಮೇಲೆ ನಿಗಾ ಇಡಲಾಗುತ್ತದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?