News Hour: ಮಲ್ಲಿಕಾರ್ಜುನ ಖರ್ಗೆಗೆ 'ಕೈ' ಸಾರಥ್ಯ ಫಿಕ್ಸ್: ಕರ್ನಾಟಕ ಕಾಂಗ್ರೆಸ್ಸಲ್ಲಿ ಪವರ್‌ ಸೆಂಟರ್‌ ಆಗ್ತಾರಾ?

News Hour: ಮಲ್ಲಿಕಾರ್ಜುನ ಖರ್ಗೆಗೆ 'ಕೈ' ಸಾರಥ್ಯ ಫಿಕ್ಸ್: ಕರ್ನಾಟಕ ಕಾಂಗ್ರೆಸ್ಸಲ್ಲಿ ಪವರ್‌ ಸೆಂಟರ್‌ ಆಗ್ತಾರಾ?

Published : Oct 01, 2022, 10:56 PM IST

Congress President Election: ಗಾಂಧಿ ಪರಿವಾರದ ನಿಷ್ಠೆಯ ಬಂಟ, ಕರ್ನಾಟಕ ದಲಿತ ಸಮುದಾಯ ಪ್ರಬಲ ನಾಯಕ, ಸಂಘಟನಾ ಚತುರ ಮಲ್ಲಿಕಾರ್ಜುನ ಖರ್ಗೆ AICC ಅಧ್ಯಕ್ಷ ಪದವಿಗೇರುವ ಕಾಲ ಸನ್ನಿಹಿತವಾಗಿದೆ

ನವದೆಹಲಿ (ಅ. 01): ಗಾಂಧಿ ಪರಿವಾರದ ನಿಷ್ಠೆಯ ಬಂಟ, ಕರ್ನಾಟಕ ದಲಿತ ಸಮುದಾಯ ಪ್ರಬಲ ನಾಯಕ, ಸಂಘಟನಾ ಚತುರ ಮಲ್ಲಿಕಾರ್ಜುನ ಖರ್ಗೆ ( Mallikarjun Kharge) AICC ಅಧ್ಯಕ್ಷ ಪದವಿಗೇರುವ ಕಾಲ ಸನ್ನಿಹಿತವಾಗಿದೆ. 2023ರ ಚುನಾವಣೆ ಮತ್ತು ಖರ್ಗೆಯವರಲ್ಲಿರುವ ಎಲ್ಲರನ್ನೂ ಒಳಗೊಳ್ಳುವ ಮನೋಭಾವಕ್ಕೆ ಮೇಡಂ ಸೋನಿಯಾ (Sonia Gandhi) ಮಣೆ ಹಾಕಿದ್ದು, ಅಕ್ಟೋಬರ್ 19ರಂದು ಹೊರ ಬೀಳಲಿರುವ ಫಲಿತಾಂಶ ಬಹುತೇಕ ಖರ್ಗೆ ಪರವೇ ಇರಲಿದೆ. ಇನ್ನು, G-23 ಬಂಡಾಯಗಾರರ ಗುಂಪಿನಿಂದಲೂ ಖರ್ಗೆಗೆ ಬೆಂಬಲ ಸಿಕ್ಕಿದ್ದು, ತರೂರ್ ಸುಲಭದ ತುತ್ತಾಗಲಿದ್ದಾರೆ. ಕನ್ನಡಿಗ ಖರ್ಗೆ AICC ಅಧ್ಯಕ್ಷ ಪದವಿಗೇರುತ್ತಿದ್ದಂತೆ ರಾಜ್ಯ ರಾಜಕಾರಣದ (Karnataka politics) ಮೇಲೂ ಪರಿಣಾಮ ಬೀರಲಿದೆ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬಣ ಬಡಿದಾಟದಿಂದ ಮುರಿದ ಮನೆಯಂತಾಗಿರುವ KPCCಗೆ ತೇಪೆ ಹಚ್ತಾರಾ ಎಂಬ ನಿರೀಕ್ಷೆಗಳು ಮೂಡಿವೆ. 

ಸೋನಿಯಾ ಗಾಂಧಿ ಅಳೆದು ತೂಗಿ ಮಲ್ಲಿಕಾರ್ಜುನ ಖರ್ಗೆಗೆ ಅಧ್ಯಕ್ಷ ಪಟ್ಟ ಕಟ್ಟುತ್ತಿರುವುದು ಕರ್ನಾಟಕ ಕಾಂಗ್ರೆಸ್‌ಗೆ ವರವಾಗಲಿದೆ ಎನ್ನಲಾಗ್ತಿದೆ. ಓಬಿಸಿ ಸಿದ್ದರಾಮಯ್ಯ, ಒಕ್ಕಲಿಗ ನಾಯಕ ಡಿಕೆಶಿ ನಂತರ, ಕಾಂಗ್ರೆಸ್ ದಲಿತ ನಾಯಕ ಖರ್ಗೆಗೆ ದೊಡ್ಡ ಸ್ಥಾನ ನೀಡಿದ್ದು, ಈಗ  ಮೂರು ಪ್ರಬಲ ಸಮುದಾಯದ ನಾಯಕರಿಗೆ ಸ್ಥಾನ ನೀಡಲಾಗಿದೆ. 

ಆದ್ರೆ ಈಗ ಕಾಂಗ್ರೆಸ್‌ನಲ್ಲಿ ಮೂರನೇ ಬಣ ಸೃಷ್ಟಿಯಾಗುವ ಆತಂಕವೂ ಎದುರಾಗಿದೆ. ಮತ್ತೊಂದು ಪವರ್ ಸೆಂಟರ್ ಮೂಲಕ ಖರ್ಗೆ, ಸಿದ್ದು-ಡಿಕೆಶಿ ಬಣ ಬಡಿದಾಟಕ್ಕೆ ಕಡಿವಾಣ ಹಾಕುವ ಸಾಧ್ಯತೆ ಇದೆ. ಇದರ ಜೊತೆಗೆ 2023ರ ಟಿಕೆಟ್ ಹಂಚಿಕೆಯಲ್ಲೂ ಖರ್ಗೆ ಪ್ರಭಾವದ ಸಾಧ್ಯತೆ ಇದೆ.  ಖರ್ಗೆ ಅಧ್ಯಕ್ಷರಾದ್ರೆ ರಾಜ್ಯ ಕಾಂಗ್ರೆಸ್‌ನ ಲೆಕ್ಕಾಚಾರ ಅದಲು ಬದಲಾಗಲಿದ್ದು, ದಲಿತ ವೊಟ್‌ ಬ್ಯಾಂಕ್ ಕಾಂಗ್ರೆಸ್ ಪರ ಗಟ್ಟಿಯಾಗೋ ಸಾಧ್ಯತೆ ಇದೆ

News Hour: ಪೇಸಿಎಂ ಅಸ್ತ್ರಕ್ಕೆ ಬಿಜೆಪಿ ನಾಯಕರ ಜಾತಿ ಪ್ರತ್ಯಸ್ತ್ರ!

ಖರ್ಗೆ AICC ಅಧ್ಯಕ್ಷ ಪದವಿಗೇರುತ್ತಿರುವುದಕ್ಕೆ ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದಾರೆ. ಖರ್ಗೆ ಮೋಸ್ಟ್ ಸೀನಿಯರ್ ಲೀಡರ್ ಆದ್ರೆ, ಇವರು ಗಾಂಧಿ ಫ್ಯಾಮಿಲಿಯ ರಬ್ಬರ್ ಸ್ಟಾಂಪ್ ಆಗೋದು ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕುಟುಕಿದ್ರೆ, ಮೊದಲು ರಾಜ್ಯದಲ್ಲಿ ಒಡೆದು ಚೂರಾಗಿರುವ ಕಾಂಗ್ರೆಸ್ ಪಕ್ಷವನ್ನ  ಸರಿಪಡಿಸಲಿ ಎಂದು MLC ರವಿಕುಮಾರ್ ಕಿಚಾಯಿಸಿದ್ದಾರೆ.

AICC ಅಧ್ಯಕ್ಷ ಚುನಾವಣೆಗೆ 3ನೇ ಅಭ್ಯರ್ಥಿಯಾಗಿದ್ದ ತ್ರಿಪಾಠಿ ನಾಮಪತ್ರ ತಿರಸ್ಕೃತಗೊಂಡಿದ್ದು, ಚುನಾವಣಾ ಕದನದಲ್ಲಿ ಖರ್ಗೆಗೆ ಎದುರಾಳಿಯಾಗಿ ಶಶಿ ತರೂರ್ ಉಳಿದುಕೊಂಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಆಯ್ಕೆ ನಿಶ್ಚಿತವಾಗಿದ್ದು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more