ನ್ಯೂಸ್ ಅವರ್; ಡಿಕೆಶಿ ಆಪ್ತರಿಗೆ ಐಟಿ ಬಿಸಿ, ಜನರಿಗೆ ಎಲ್‌ಪಿಜಿ ಬಿಸಿ ಬಿಸಿ!

ನ್ಯೂಸ್ ಅವರ್; ಡಿಕೆಶಿ ಆಪ್ತರಿಗೆ ಐಟಿ ಬಿಸಿ, ಜನರಿಗೆ ಎಲ್‌ಪಿಜಿ ಬಿಸಿ ಬಿಸಿ!

Published : Oct 28, 2021, 11:39 PM ISTUpdated : Oct 28, 2021, 11:44 PM IST

* ಮತ್ತೆ ಎಲ್‌ಪಿಜಿ ದರ ಏರಿಕೆ... ಸಾವಿರ ರೂ. ಫಿಕ್ಸ್!
* ಉಪ ಸಮರ ಎದುರಿನಲ್ಲೇ ಡಿಕೆಶಿ ಆಪ್ತರ ಮೇಲೆ ಐಟಿ ದಾಳಿ
* ಆರ್ಯನ್ ಖಾನ್ ಗೆ ಕೊನೆಗು ಜಾಮೀನು ಸಿಕ್ತು
* ಪ್ರಚಾರ ಮುಗಿದರೂ ಮುಗಿಯದ ವಾಕ್ ಸಮರ

ಬೆಂಗಳೂರು(ಅ. 28)   ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ (Karnataka By Poll) ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.  ಆದರೆ ನಾಯಕರ ಮಾತಿನ ಸಮರ ಇನ್ನೂ ನಿಂತಿಲ್ಲ. ಕಂಬಳಿ ಕದನ ಮತ್ತೆ ಹೊತ್ತಿಕೊಂಡಿದೆ. ಇದರ ನಡುವೆ ಸಿದ್ದರಾಮಯ್ಯ (Siddaramaiah) ಹೊಸ ಬಾಂಬ್ ಸಿಡಿಸಿದ್ದಾರೆ. ಗೋವಾ(Goa) ದಿಂದ ಬಂದ ಇಪ್ಪತ್ತಕ್ಕೂ ಅಧಿಕ  ಐಟಿ ಅಧಿಕಾರಿಗಳ ತಂಡ ಧಾರವಾಡದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆಪ್ತರ ಮನೆ ಮೇಲೆ ದಾಳಿ ಮಾಡಿದ್ದಾರೆ.

ಏಜೆಂಟರಾಗಿ ಕೆಲಸ ಮಾಡುವ ಸ್ಥಿತಿ ಬಂದಿಲ್ಲ; ಗುಡುಗಿದ ದೇವೇಗೌಡ

ಇಂಧನ ಮತ್ತು ಅಡುಗೆ ಅನಿಲ(LPG) ದರ ನಿರಂತರ ಏರಿಕೆಯಾಗುತ್ತಲೇ ಇದೆ. ನವೆಂಬರ್ ಆರಂಭದಿಂದ ಎಲ್‌ಪಿಜಿ ದರದಲ್ಲಿ ಮತ್ತೊಂದು ಸುತ್ತಿನ ಏರಿಕೆಯಾಗಲಿದೆ ಎನ್ನಲಾಗಿದೆ.  ರಾಜ್ಯದಲ್ಲಿ ಈ ಬಾರಿ ಒಂದು ವಾರ ಕನ್ನಡ ರಾಜ್ಯೋತ್ಸವ (Karnataka Rajyotsava) ಆಚರಣೆ ಮಾಡಲಾಗುತ್ತಿದೆ. ಅದ್ಧೂರಿ ಆಚರಣೆಗೆ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಮೂಲಕ ಚಾಲನೆ ನೀಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ವಿಶೇಷ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.  ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಡ್ರಗ್ಸ್ ಪ್ರಕರಣದಲ್ಲಿ NCB ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ  ಆರ್ಯನ್ ಖಾನ್, ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿ 25 ದಿನ ಕಳೆದಿದ್ದಾರೆ. ನಾಳೆ ಆರ್ಯನ್ ಖಾನ್ (Aryan Khan)  ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಡೀ ದಿನದ ಸುದ್ದಿ News Hour ನಲ್ಲಿ.. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more