Nitish Kumar : ಬಿಜೆಪಿ ಜೊತೆ ನಿತೀಶ್ ಹೊಸ ಆಟ..I.N.D.I.A ಕೂಟಕ್ಕೆ ಪ್ರಾಣಸಂಕಟ..!

Nitish Kumar : ಬಿಜೆಪಿ ಜೊತೆ ನಿತೀಶ್ ಹೊಸ ಆಟ..I.N.D.I.A ಕೂಟಕ್ಕೆ ಪ್ರಾಣಸಂಕಟ..!

Published : Jan 28, 2024, 03:01 PM IST

ಜಂಪಿಂಗ್ ಸ್ಟಾರ್ ನಿತೀಶ್ ಹಿಂದಿದೆ ಇಂಟ್ರೆಸ್ಟಿಂಗ್ ಟ್ರ್ಯಾಕ್ ರೆಕಾರ್ಡ್..!
"ಅಂದರ್ ಬಾಹರ್" ಆಟದ ನಿಸ್ಸೀಮನಿಂದ ಮತ್ತೊಂದು ಚದುರಂಗ..!
ಮೈತ್ರಿ ಆಟದ ನಿಸ್ಸೀಮ.. ದೋಸ್ತಿ ಬದಲಿಸಿದ್ದೇಕೆ “ಬಿಹಾರಿ ಬಾಬು”..? 
 

ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ(Bihar) ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರದ ಜೆಡಿಯು ಲೀಡರ್ ನಿತೀಶ್ ಕುಮಾರ್ ಆ ಸಾಲಿಗೆ ಸೇರಿದವರು. ಮೀನಿನ ಹೆಜ್ಜೆ ಗುರುತನ್ನು ಬೇಕಾದ್ರೂ ಕಂಡು ಹಿಡಿಯಬಹುದು. ಆದ್ರೆ ನಿತೀಶ್ ಕುಮಾರ್ ಅವ್ರ ರಾಜಕೀಯ ನಡೆಗಳನ್ನು ಗುರುತಿಸೋದು ಕಷ್ಟ. ಕಳೆದ 10 ವರ್ಷಗಳಲ್ಲಿ ನಿತೀಶ್ ಕುಮಾರ್ ಆಡಿದ ರಾಜಕೀಯದಾಟಗಳನ್ನು ನೋಡಿದ್ರೆ, ಎಂಥವರಾದ್ರೂ ಒಂದು ಕ್ಷಣ ಬೆಚ್ಚಿ ಬೀಳ್ತಾರೆ, ಅಚ್ಚರಿ ಪಡ್ತಾರೆ. ಈಗ ನಿತೀಶ್ ಅಂಥದ್ದೇ ಆಟವನ್ನು ಆಡ್ತಾ ಇದ್ದಾರೆ. ಆರ್.ಜೆ.ಡಿ(RJD) ಮತ್ತು ಕಾಂಗ್ರೆಸ್(Congress) ಜೊತೆಗೂಡಿ ಮಹಾಘಟಬಂಧನ್ ಹೆಸರಿನ ಮೈತ್ರಿಕೂಟ ಕಟ್ಟಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್, ಈಗ ಮತ್ತೊಮ್ಮೆ ಚದುರಂಗದಲ್ಲಿ ಹೊಸ ದಾಳ ಉರುಳಿಸಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ಬಿಜೆಪಿ(BJP) ಜೊತೆ ಸೇರಿ ಹೊಸ ಸರ್ಕಾರ ರಚಿಸೋದಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಇದೇ 29ರಂದು ಬಿಹಾರ ಪ್ರವೇಶಿಸ್ತಾ ಇದೆ. ಅದಕ್ಕೂ ಮೊದಲೇ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಗಾಳಿ ಎದ್ದಿದೆ. ಇಂಡಿಯಾ ಮೈತ್ರಿಕೂಟದ ರೂವಾರಿ ನಿತೀಶ್ ಕುಮಾರ್, ಮಹಾಮೈತ್ರಿಯಿಂದ ಹೊರ ನಡೆದು ಮತ್ತೆ NDA ಮೈತ್ರಿಕೂಟ ಸೇರಿದ್ದಾರೆ.

ಇದನ್ನೂ ವೀಕ್ಷಿಸಿ:  ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more