Nitish Kumar : ಬಿಜೆಪಿ ಜೊತೆ ನಿತೀಶ್ ಹೊಸ ಆಟ..I.N.D.I.A ಕೂಟಕ್ಕೆ ಪ್ರಾಣಸಂಕಟ..!

Nitish Kumar : ಬಿಜೆಪಿ ಜೊತೆ ನಿತೀಶ್ ಹೊಸ ಆಟ..I.N.D.I.A ಕೂಟಕ್ಕೆ ಪ್ರಾಣಸಂಕಟ..!

Published : Jan 28, 2024, 03:01 PM IST

ಜಂಪಿಂಗ್ ಸ್ಟಾರ್ ನಿತೀಶ್ ಹಿಂದಿದೆ ಇಂಟ್ರೆಸ್ಟಿಂಗ್ ಟ್ರ್ಯಾಕ್ ರೆಕಾರ್ಡ್..!
"ಅಂದರ್ ಬಾಹರ್" ಆಟದ ನಿಸ್ಸೀಮನಿಂದ ಮತ್ತೊಂದು ಚದುರಂಗ..!
ಮೈತ್ರಿ ಆಟದ ನಿಸ್ಸೀಮ.. ದೋಸ್ತಿ ಬದಲಿಸಿದ್ದೇಕೆ “ಬಿಹಾರಿ ಬಾಬು”..? 
 

ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ(Bihar) ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರದ ಜೆಡಿಯು ಲೀಡರ್ ನಿತೀಶ್ ಕುಮಾರ್ ಆ ಸಾಲಿಗೆ ಸೇರಿದವರು. ಮೀನಿನ ಹೆಜ್ಜೆ ಗುರುತನ್ನು ಬೇಕಾದ್ರೂ ಕಂಡು ಹಿಡಿಯಬಹುದು. ಆದ್ರೆ ನಿತೀಶ್ ಕುಮಾರ್ ಅವ್ರ ರಾಜಕೀಯ ನಡೆಗಳನ್ನು ಗುರುತಿಸೋದು ಕಷ್ಟ. ಕಳೆದ 10 ವರ್ಷಗಳಲ್ಲಿ ನಿತೀಶ್ ಕುಮಾರ್ ಆಡಿದ ರಾಜಕೀಯದಾಟಗಳನ್ನು ನೋಡಿದ್ರೆ, ಎಂಥವರಾದ್ರೂ ಒಂದು ಕ್ಷಣ ಬೆಚ್ಚಿ ಬೀಳ್ತಾರೆ, ಅಚ್ಚರಿ ಪಡ್ತಾರೆ. ಈಗ ನಿತೀಶ್ ಅಂಥದ್ದೇ ಆಟವನ್ನು ಆಡ್ತಾ ಇದ್ದಾರೆ. ಆರ್.ಜೆ.ಡಿ(RJD) ಮತ್ತು ಕಾಂಗ್ರೆಸ್(Congress) ಜೊತೆಗೂಡಿ ಮಹಾಘಟಬಂಧನ್ ಹೆಸರಿನ ಮೈತ್ರಿಕೂಟ ಕಟ್ಟಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್, ಈಗ ಮತ್ತೊಮ್ಮೆ ಚದುರಂಗದಲ್ಲಿ ಹೊಸ ದಾಳ ಉರುಳಿಸಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ಬಿಜೆಪಿ(BJP) ಜೊತೆ ಸೇರಿ ಹೊಸ ಸರ್ಕಾರ ರಚಿಸೋದಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಇದೇ 29ರಂದು ಬಿಹಾರ ಪ್ರವೇಶಿಸ್ತಾ ಇದೆ. ಅದಕ್ಕೂ ಮೊದಲೇ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಗಾಳಿ ಎದ್ದಿದೆ. ಇಂಡಿಯಾ ಮೈತ್ರಿಕೂಟದ ರೂವಾರಿ ನಿತೀಶ್ ಕುಮಾರ್, ಮಹಾಮೈತ್ರಿಯಿಂದ ಹೊರ ನಡೆದು ಮತ್ತೆ NDA ಮೈತ್ರಿಕೂಟ ಸೇರಿದ್ದಾರೆ.

ಇದನ್ನೂ ವೀಕ್ಷಿಸಿ:  ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more