Nitish Kumar : ಬಿಜೆಪಿ ಜೊತೆ ನಿತೀಶ್ ಹೊಸ ಆಟ..I.N.D.I.A ಕೂಟಕ್ಕೆ ಪ್ರಾಣಸಂಕಟ..!

Nitish Kumar : ಬಿಜೆಪಿ ಜೊತೆ ನಿತೀಶ್ ಹೊಸ ಆಟ..I.N.D.I.A ಕೂಟಕ್ಕೆ ಪ್ರಾಣಸಂಕಟ..!

Published : Jan 28, 2024, 03:01 PM IST

ಜಂಪಿಂಗ್ ಸ್ಟಾರ್ ನಿತೀಶ್ ಹಿಂದಿದೆ ಇಂಟ್ರೆಸ್ಟಿಂಗ್ ಟ್ರ್ಯಾಕ್ ರೆಕಾರ್ಡ್..!
"ಅಂದರ್ ಬಾಹರ್" ಆಟದ ನಿಸ್ಸೀಮನಿಂದ ಮತ್ತೊಂದು ಚದುರಂಗ..!
ಮೈತ್ರಿ ಆಟದ ನಿಸ್ಸೀಮ.. ದೋಸ್ತಿ ಬದಲಿಸಿದ್ದೇಕೆ “ಬಿಹಾರಿ ಬಾಬು”..? 
 

ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ(Bihar) ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರದ ಜೆಡಿಯು ಲೀಡರ್ ನಿತೀಶ್ ಕುಮಾರ್ ಆ ಸಾಲಿಗೆ ಸೇರಿದವರು. ಮೀನಿನ ಹೆಜ್ಜೆ ಗುರುತನ್ನು ಬೇಕಾದ್ರೂ ಕಂಡು ಹಿಡಿಯಬಹುದು. ಆದ್ರೆ ನಿತೀಶ್ ಕುಮಾರ್ ಅವ್ರ ರಾಜಕೀಯ ನಡೆಗಳನ್ನು ಗುರುತಿಸೋದು ಕಷ್ಟ. ಕಳೆದ 10 ವರ್ಷಗಳಲ್ಲಿ ನಿತೀಶ್ ಕುಮಾರ್ ಆಡಿದ ರಾಜಕೀಯದಾಟಗಳನ್ನು ನೋಡಿದ್ರೆ, ಎಂಥವರಾದ್ರೂ ಒಂದು ಕ್ಷಣ ಬೆಚ್ಚಿ ಬೀಳ್ತಾರೆ, ಅಚ್ಚರಿ ಪಡ್ತಾರೆ. ಈಗ ನಿತೀಶ್ ಅಂಥದ್ದೇ ಆಟವನ್ನು ಆಡ್ತಾ ಇದ್ದಾರೆ. ಆರ್.ಜೆ.ಡಿ(RJD) ಮತ್ತು ಕಾಂಗ್ರೆಸ್(Congress) ಜೊತೆಗೂಡಿ ಮಹಾಘಟಬಂಧನ್ ಹೆಸರಿನ ಮೈತ್ರಿಕೂಟ ಕಟ್ಟಿ ಸರ್ಕಾರ ರಚಿಸಿದ್ದ ನಿತೀಶ್ ಕುಮಾರ್, ಈಗ ಮತ್ತೊಮ್ಮೆ ಚದುರಂಗದಲ್ಲಿ ಹೊಸ ದಾಳ ಉರುಳಿಸಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ಬಿಜೆಪಿ(BJP) ಜೊತೆ ಸೇರಿ ಹೊಸ ಸರ್ಕಾರ ರಚಿಸೋದಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆ ಇದೇ 29ರಂದು ಬಿಹಾರ ಪ್ರವೇಶಿಸ್ತಾ ಇದೆ. ಅದಕ್ಕೂ ಮೊದಲೇ ಇಂಡಿಯಾ ಮೈತ್ರಿಕೂಟದಲ್ಲಿ ಬಿರುಗಾಳಿ ಎದ್ದಿದೆ. ಇಂಡಿಯಾ ಮೈತ್ರಿಕೂಟದ ರೂವಾರಿ ನಿತೀಶ್ ಕುಮಾರ್, ಮಹಾಮೈತ್ರಿಯಿಂದ ಹೊರ ನಡೆದು ಮತ್ತೆ NDA ಮೈತ್ರಿಕೂಟ ಸೇರಿದ್ದಾರೆ.

ಇದನ್ನೂ ವೀಕ್ಷಿಸಿ:  ಇಂಡಿಯಾ ಮೈತ್ರಿಕೂಟ ಛಿದ್ರವಾಗಿದೆ, ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತೆ: ಬಿಎಸ್‌ವೈ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more