Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Bihar Politics: ನಿತೀಶ್ ನಡೆಯಿಂದ ಕಂಗಾಲಾಯ್ತು ಆರ್‌ಜೆಡಿ..! ಹೇಗಿತ್ತು ಜಂಪಿಂಗ್ ಸ್ಟಾರ್ ಪೊಲಿಟಿಕಲ್ ಗೇಮ್..?

Published : Jan 29, 2024, 04:09 PM ISTUpdated : Jan 29, 2024, 04:10 PM IST

ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳೂ ಸಿದ್ಧವಾಗ್ತಾ ಇರೋ ಸಮಯದಲ್ಲೇ ಬಿಹಾರ ರಾಜಕೀಯ ರಂಗೇರಿದೆ. ನಿತೀಶ್ ಕುಮಾರ್ ನಡೆ ಐ ಎನ್ ಡಿ ಐ ಎ ಒಕ್ಕೂಟಕ್ಕೆ ಬಿಗ್ ಶಾಕ್ ನೀಡಿದೆ. ಹಳೇ ದೋಸ್ತಿ ಜತೆ JDU ಸರ್ಕಾರ ರಚನೆ ಫಿಕ್ಸ್ ಆಗಿದೆ. ಬೆಳಗ್ಗೆ ರಾಜೀನಾಮೆ ಸಂಜೆ ಪ್ರಮಾಣವಚನ ಎಂಬ ಪೊಲಿಟಿಕಲ್ ಹೈಡ್ರಾಮಾಕ್ಕೆ ಬಿಹಾರ ಸಾಕ್ಷಿ ಆಗಿದೆ.

ಬಿಹಾರ ರಾಜಕೀಯದಲ್ಲಿ ಮಹತ್ವದ ಟ್ವಿಸ್ಟ್ ಪಡೆದಿದೆ. ಲೋಕಸಭೆ(Loksabha)ಹೊತ್ತಲ್ಲೇ RJD, ಕಾಂಗ್ರೆಸ್ಗೆ ನಿತೀಶ್(Nitish Kumar) ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಮಹಾಘಟಬಂಧನ ಬಿಡಿಸಿಕೊಂಡು ಹಳೇ ದೋಸ್ತಿಗೆ ಜೈಕಾರ ಹಾಕಿದ್ದಾರೆ.. ಪಟ್ನಾದಲ್ಲಿ ನಡೆದಿದ್ದ ಮಹತ್ವದ ಸಭೆಯಲ್ಲಿ ಸರ್ಕಾರ ರಚನೆಗೆ ಬಿಜೆಪಿ(BJP) ಒಪ್ಪಿಗೆ ಸೂಚಿಸಿದೆ. ಬಿಹಾರ(Bihar) ಎನ್ಡಿಎ ಮಿತ್ರಪಕ್ಷಗಳ ಜೊತೆ ಅಮಿತ್ ಶಾ ನಡೆಸಿದ ಚರ್ಚೆಯೂ ಸಕ್ಸಸ್ ಆಗಿದೆ. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನೋದಕ್ಕೆ ಬಿಹಾರದ ಹೈಡ್ರಾಮಾವಾ ಸಾಕ್ಷಿ. ನಿತೀಶ್ ಕುಮಾರ್ ಅವರು ರಾಜಕೀಯದಲ್ಲಿ ಹೊಸ ಬಟ್ಟೆ ಇದ್ದಂತೆ. ಬಣ್ಣ ಬಿಡುತ್ತಲೇ ಇರುತ್ತೆ. ಬಹುಷಃ ನಿತೀಶ್ ಕುಮಾರ್ ಅವರು ಮೈತ್ರಿ ಬದಲಿಸಿದಷ್ಟು ಇನ್ಯಾರೂ ಬದಲಿಸಿರೋಕೆ ಸಾಧ್ಯವೆ ಇಲ್ಲ. ಯಾವಾಗ ಯಾರ ಜೊತೆಗೆ ನಿಲ್ತಾರೆ ಅನ್ನೋದೇ ಊಹಿಸಲಾಗದ ನಡೆ. ರಾಜಕೀಯ ಕ್ಷಿಪ್ರಕ್ರಾಂತಿಯ ನೆಲ ಬಿಹಾರದ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ ಬೀಸಿದೆ. ಇದು ಬಿರುಗಾಳಿಯಷ್ಟೇ ಅಲ್ಲ, ಸುನಾಮಿ.. I.N.D.I.A ಮೈತ್ರಿಕೂಟದ ಸೂತ್ರಧಾರ, ಪ್ರಧಾನಿ ಮೋದಿ ವಿರುದ್ಧ ದಂಡು ಕಟ್ಟಿ ಯುದ್ಧಕ್ಕೆ ನಿಂತಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಇದ್ದಕ್ಕಿದ್ದಂತೆ ತಮ್ಮ ವರಸೆ ಬದಲಿಸಿದ್ದಾರೆ. ಬಿಹಾರಿ ಬಾಬುವಿನ ಹೊಸ ವರಸೆ ನೋಡಿ ಬಿಹಾರಕ್ಕೆ ಬಿಹಾರವೇ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಆರ್ ಜೆ ಡಿ ಸಖ್ಯದಿಂದ ದೂರವಾಗಿರೋ ನಿತೀಶ್ ಕುಮಾರ್ ಇಂಡಿಯಾ ಒಕ್ಕೂಟಕ್ಕೆ ಸಿಡಿಲು ಬಡಿವಂತೆ ಮಾಡಿ ಬಿಟ್ಟಿದ್ದಾರೆ.

ಇದನ್ನೂ ವೀಕ್ಷಿಸಿ:  ಜಾತಿ ಗಣತಿ ವರದಿ ಜಾರಿಯ ಗ್ಯಾರಂಟಿ ನೀಡಿದ ಸಿಎಂ..! ಭಾಷಣದುದ್ದಕ್ಕೂ RSS-BJP ವಿರುದ್ಧ ಗುಡುಗಿದ ಸಿದ್ದು

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more