Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Published : Dec 24, 2021, 04:14 PM ISTUpdated : Dec 24, 2021, 04:21 PM IST

ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ.

ಬೆಂಗಳೂರು (ಡಿ. 24): ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಶಾದ್ಯಂತ ಒಮಿಕ್ರೋನ್ ಹೆಚ್ಚುತ್ತಿದ್ದು, ವೈರಸ್ ನಿರ್ವಹಣೆಗೆ ರಾಜ್ಯಗಳಿಗೆ ಸಕಲ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ದೇಶದಾದ್ಯಂತ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.  ಅಮೆರಿಕಾ, ಯುರೋಪ್‌ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದಕ್ಕೆ ಡೆಲ್ಮಿಕ್ರೋನ್‌ ಕಾರಣ ಎಂದು ಹೇಳಲಾಗುತ್ತಿದೆ. ಕೋವಿಡ್‌ನ ರೂಪಾಂತರಿಗಳಾದ ಡೆಲ್ಟಾ ಮತ್ತು ಒಮಿಕ್ರೋನ್‌ಗಳನ್ನು ಸೇರಿಸಿ ಈ ಹೊಸ ಪದವನ್ನು ಸೃಷ್ಟಿಮಾಡಲಾಗಿದೆ. ಇನ್ನು ಫೆಬ್ರವರಿ ಅಂತ್ಯದೊಳಗೆ 3 ನೇ ಅಲೆ ಪಕ್ಕಾ ಎಂದು ಕಾನ್ಪುರ ಐಐಟಿ ತಜ್ಞರು ಎಚ್ಚರಿಸಿದ್ದಾರೆ. 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more