Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Omicron Variant: ರಾಜ್ಯದಲ್ಲಿ ಸೋಂಕು ಸ್ಫೋಟ, ಫೆಬ್ರವರಿಯಲ್ಲಿ 3 ನೇ ಖಚಿತ, ಎಚ್ಚರ ವಹಿಸಿ ಎಂದ ಮೋದಿ

Published : Dec 24, 2021, 04:14 PM ISTUpdated : Dec 24, 2021, 04:21 PM IST

ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ.

ಬೆಂಗಳೂರು (ಡಿ. 24): ರಾಜ್ಯದಲ್ಲಿ ದಿನೇ ದಿನೇ ಒಮಿಕ್ರೋನ್ (Omicron Variant )  ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ವಿದೇಶಗಳಿಂದ ಕಳೆದ ವಾರ ರಾಜ್ಯಕ್ಕೆ ಆಗಮಿಸಿದ 9 ಪ್ರಯಾಣಿಕರು ಹಾಗೂ ಅವರ ಕುಟುಂಬದ ಮೂವರು ಸೇರಿ 12 ಮಂದಿಯಲ್ಲಿ ಒಮಿಕ್ರೋನ್‌ ಸೋಂಕು ಗುರುವಾರ ದೃಢಪಟ್ಟಿದೆ. 12 ಮಂದಿಯಲ್ಲಿ ಇಬ್ಬರು ಬಾಲಕಿಯರೂ ಇದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ರೂಪಾಂತರಿ ಸೋಂಕಿತರ ಒಟ್ಟು ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಶಾದ್ಯಂತ ಒಮಿಕ್ರೋನ್ ಹೆಚ್ಚುತ್ತಿದ್ದು, ವೈರಸ್ ನಿರ್ವಹಣೆಗೆ ರಾಜ್ಯಗಳಿಗೆ ಸಕಲ ನೆರವು ನೀಡಲು ಕೇಂದ್ರ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. 

ದೇಶದಾದ್ಯಂತ ಒಮಿಕ್ರೋನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ ಸಿಂಗ್‌ ಚೌಹಾಣ್‌ ಗುರುವಾರದಿಂದಲೇ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದ್ದಾರೆ.  ಅಮೆರಿಕಾ, ಯುರೋಪ್‌ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದಕ್ಕೆ ಡೆಲ್ಮಿಕ್ರೋನ್‌ ಕಾರಣ ಎಂದು ಹೇಳಲಾಗುತ್ತಿದೆ. ಕೋವಿಡ್‌ನ ರೂಪಾಂತರಿಗಳಾದ ಡೆಲ್ಟಾ ಮತ್ತು ಒಮಿಕ್ರೋನ್‌ಗಳನ್ನು ಸೇರಿಸಿ ಈ ಹೊಸ ಪದವನ್ನು ಸೃಷ್ಟಿಮಾಡಲಾಗಿದೆ. ಇನ್ನು ಫೆಬ್ರವರಿ ಅಂತ್ಯದೊಳಗೆ 3 ನೇ ಅಲೆ ಪಕ್ಕಾ ಎಂದು ಕಾನ್ಪುರ ಐಐಟಿ ತಜ್ಞರು ಎಚ್ಚರಿಸಿದ್ದಾರೆ. 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more