ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Published : Dec 14, 2024, 11:07 PM IST

ಭಾರತದಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಸೂದೆಯನ್ನು ಜಂಟಿ ಸದನ ಸಮಿತಿಯ ನಿಷ್ಕರ್ಷೆಗೆ ಒಳಪಡಿಸುವ ಸಾಧ್ಯತೆಯಿದೆ.

ಭಾರತದಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಲೋಕಸಭೆ, ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಮಸೂದೆ ಸೋಮವಾರ ಸಂಸತ್ತಿನಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ. ಮಂಡನೆ ಬಳಿಕ ವಿಧೇಯಕವನ್ನು ಜಂಟಿ ಸದನ ಸಮಿತಿ ನಿಷ್ಕರ್ಷೆಗೆ ಒಳಪಡಿಸುವ ಸಂಭವವಿದೆ.

ಎಲ್ಲ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಸೂದೆ ಅಂಗೀಕರಿಸುವ ಉದ್ದೇಶವಿರುವ ಕಾರಣ ತಕ್ಷಣ ಇದನ್ನು ಅಂಗೀಕರಿಸುವುದಿಲ್ಲ. ಬದಲಾಗಿ, ವಕ್ಫ್‌ ತಿದ್ದುಪಡಿ ಮಸೂದೆಯಂತೆಯೇ ಇದನ್ನು ಜಂಟಿ ಸದನ ಸಮಿತಿಗೆ (ಜೆಪಿಸಿ) ಕಳಿಸಿ ಅಲ್ಲಿ ಸರ್ವಸಮ್ಮತಿ ಪಡೆಯಲು ಯತ್ನಿಸಲಾಗುತ್ತದೆ. ರಾಜ್ಯಗಳ ವಿಧಾನಸಭೆ ಸ್ಪೀಕರ್‌ಗಳು, ಜನಪ್ರತಿನಧಿಗಳು, ಬುದ್ಧಿಜೀವಿಗಳು, ತಜ್ಞರು ಮತ್ತು ನಾಗರಿಕ ಸಮಾಜದ ಸದಸ್ಯರು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನೂ ಆಲಿಸುವ ಉದ್ದೇಶ ಸರ್ಕಾರಕ್ಕೆಇದೆ ಎಂದು ಮೂಲಗಳು ಹೇಳಿವೆ.

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಏಕಕಾಲಕ್ಕೆ ಎಲ್ಲ ಚುನಾವಣೆ ನಡೆಸುವುದು ಕೂಡ ಒಂದಾಗಿತ್ತು. ಪದೇ ಪದೇ ಚುನಾವಣೆ ನಡೆಯುವ ಕಾರಣ ಎದುರಾಗುವ ನೀತಿ ಸಂಹಿತೆಗಳಿಂದ ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಹಾಗೂ ನಿರಂತರ ಚುನಾವಣೆಗಳಿಂದ ಅನಗತ್ಯ ಖರ್ಚಾಗುತ್ತದೆ. ಒಟ್ಟಿಗೇ ಚುನಾವಣೆ ನಡೆದರೆ ಖರ್ಚು ತಗ್ಗುತ್ತದೆ ಎಂಬ ಕಾರಣಕ್ಕೆ ಏಕ ಚುನಾವಣೆ ಅಗತ್ಯ ಎಂದು ಬಿಜೆಪಿ ಒತ್ತಿ ಹೇಳಿತ್ತು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!