ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Published : Dec 14, 2024, 11:07 PM IST

ಭಾರತದಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಸೂದೆಯನ್ನು ಜಂಟಿ ಸದನ ಸಮಿತಿಯ ನಿಷ್ಕರ್ಷೆಗೆ ಒಳಪಡಿಸುವ ಸಾಧ್ಯತೆಯಿದೆ.

ಭಾರತದಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಲೋಕಸಭೆ, ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಮಸೂದೆ ಸೋಮವಾರ ಸಂಸತ್ತಿನಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ. ಮಂಡನೆ ಬಳಿಕ ವಿಧೇಯಕವನ್ನು ಜಂಟಿ ಸದನ ಸಮಿತಿ ನಿಷ್ಕರ್ಷೆಗೆ ಒಳಪಡಿಸುವ ಸಂಭವವಿದೆ.

ಎಲ್ಲ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಸೂದೆ ಅಂಗೀಕರಿಸುವ ಉದ್ದೇಶವಿರುವ ಕಾರಣ ತಕ್ಷಣ ಇದನ್ನು ಅಂಗೀಕರಿಸುವುದಿಲ್ಲ. ಬದಲಾಗಿ, ವಕ್ಫ್‌ ತಿದ್ದುಪಡಿ ಮಸೂದೆಯಂತೆಯೇ ಇದನ್ನು ಜಂಟಿ ಸದನ ಸಮಿತಿಗೆ (ಜೆಪಿಸಿ) ಕಳಿಸಿ ಅಲ್ಲಿ ಸರ್ವಸಮ್ಮತಿ ಪಡೆಯಲು ಯತ್ನಿಸಲಾಗುತ್ತದೆ. ರಾಜ್ಯಗಳ ವಿಧಾನಸಭೆ ಸ್ಪೀಕರ್‌ಗಳು, ಜನಪ್ರತಿನಧಿಗಳು, ಬುದ್ಧಿಜೀವಿಗಳು, ತಜ್ಞರು ಮತ್ತು ನಾಗರಿಕ ಸಮಾಜದ ಸದಸ್ಯರು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನೂ ಆಲಿಸುವ ಉದ್ದೇಶ ಸರ್ಕಾರಕ್ಕೆಇದೆ ಎಂದು ಮೂಲಗಳು ಹೇಳಿವೆ.

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಏಕಕಾಲಕ್ಕೆ ಎಲ್ಲ ಚುನಾವಣೆ ನಡೆಸುವುದು ಕೂಡ ಒಂದಾಗಿತ್ತು. ಪದೇ ಪದೇ ಚುನಾವಣೆ ನಡೆಯುವ ಕಾರಣ ಎದುರಾಗುವ ನೀತಿ ಸಂಹಿತೆಗಳಿಂದ ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಹಾಗೂ ನಿರಂತರ ಚುನಾವಣೆಗಳಿಂದ ಅನಗತ್ಯ ಖರ್ಚಾಗುತ್ತದೆ. ಒಟ್ಟಿಗೇ ಚುನಾವಣೆ ನಡೆದರೆ ಖರ್ಚು ತಗ್ಗುತ್ತದೆ ಎಂಬ ಕಾರಣಕ್ಕೆ ಏಕ ಚುನಾವಣೆ ಅಗತ್ಯ ಎಂದು ಬಿಜೆಪಿ ಒತ್ತಿ ಹೇಳಿತ್ತು.

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?