ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ಒಂದು ರಾಷ್ಟ್ರ, ಒಂದು ಚುನಾವಣೆ: ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Published : Dec 14, 2024, 11:07 PM IST

ಭಾರತದಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ 'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮಸೂದೆಯನ್ನು ಜಂಟಿ ಸದನ ಸಮಿತಿಯ ನಿಷ್ಕರ್ಷೆಗೆ ಒಳಪಡಿಸುವ ಸಾಧ್ಯತೆಯಿದೆ.

ಭಾರತದಾದ್ಯಂತ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಗುರಿಯನ್ನು ಹೊಂದಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. 

ಲೋಕಸಭೆ, ವಿಧಾನಸಭೆಗಳಿಗೆ ಒಟ್ಟಿಗೆ ಚುನಾವಣೆ ನಡೆಸುವ ‘ಒಂದು ದೇಶ ಒಂದು ಚುನಾವಣೆ’ ಮಸೂದೆ ಸೋಮವಾರ ಸಂಸತ್ತಿನಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ. ಮಂಡನೆ ಬಳಿಕ ವಿಧೇಯಕವನ್ನು ಜಂಟಿ ಸದನ ಸಮಿತಿ ನಿಷ್ಕರ್ಷೆಗೆ ಒಳಪಡಿಸುವ ಸಂಭವವಿದೆ.

ಎಲ್ಲ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಸೂದೆ ಅಂಗೀಕರಿಸುವ ಉದ್ದೇಶವಿರುವ ಕಾರಣ ತಕ್ಷಣ ಇದನ್ನು ಅಂಗೀಕರಿಸುವುದಿಲ್ಲ. ಬದಲಾಗಿ, ವಕ್ಫ್‌ ತಿದ್ದುಪಡಿ ಮಸೂದೆಯಂತೆಯೇ ಇದನ್ನು ಜಂಟಿ ಸದನ ಸಮಿತಿಗೆ (ಜೆಪಿಸಿ) ಕಳಿಸಿ ಅಲ್ಲಿ ಸರ್ವಸಮ್ಮತಿ ಪಡೆಯಲು ಯತ್ನಿಸಲಾಗುತ್ತದೆ. ರಾಜ್ಯಗಳ ವಿಧಾನಸಭೆ ಸ್ಪೀಕರ್‌ಗಳು, ಜನಪ್ರತಿನಧಿಗಳು, ಬುದ್ಧಿಜೀವಿಗಳು, ತಜ್ಞರು ಮತ್ತು ನಾಗರಿಕ ಸಮಾಜದ ಸದಸ್ಯರು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನೂ ಆಲಿಸುವ ಉದ್ದೇಶ ಸರ್ಕಾರಕ್ಕೆಇದೆ ಎಂದು ಮೂಲಗಳು ಹೇಳಿವೆ.

ಲೋಕಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ ಪ್ರಮುಖ ಭರವಸೆಗಳಲ್ಲಿ ಏಕಕಾಲಕ್ಕೆ ಎಲ್ಲ ಚುನಾವಣೆ ನಡೆಸುವುದು ಕೂಡ ಒಂದಾಗಿತ್ತು. ಪದೇ ಪದೇ ಚುನಾವಣೆ ನಡೆಯುವ ಕಾರಣ ಎದುರಾಗುವ ನೀತಿ ಸಂಹಿತೆಗಳಿಂದ ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಹಾಗೂ ನಿರಂತರ ಚುನಾವಣೆಗಳಿಂದ ಅನಗತ್ಯ ಖರ್ಚಾಗುತ್ತದೆ. ಒಟ್ಟಿಗೇ ಚುನಾವಣೆ ನಡೆದರೆ ಖರ್ಚು ತಗ್ಗುತ್ತದೆ ಎಂಬ ಕಾರಣಕ್ಕೆ ಏಕ ಚುನಾವಣೆ ಅಗತ್ಯ ಎಂದು ಬಿಜೆಪಿ ಒತ್ತಿ ಹೇಳಿತ್ತು.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್