ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

Published : Oct 26, 2022, 11:13 PM IST

ಬ್ರಿಟನ್‌ನಲ್ಲಿ ಅಲ್ಪಸಂಖ್ಯಾತ ಹಿಂದೂಗೆ ಪ್ರಧಾನಿ ಪಟ್ಟ ನೀಡಿರುವುದು, ದೇಶದಲ್ಲಿ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಇದೇ ಅಸ್ತ್ರ ಹಿಡಿದು ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರೂ ಕೆಂಡಾಮಂಡಲರಾಗಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತ ಅತ್ಯುನ್ನತ ಹುದ್ದೆ ಸಿಕ್ಕಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು (ಅ. 26): ಬ್ರಿಟನ್ ದೇಶದಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ತಮ್ಮ ಅಧಿಕಾರ ಆರಂಭಿಸಿದ್ದಾರೆ. ಅಲ್ಪ ಸಂಖ್ಯಾತ ಹಿಂದುವಿಗೆ ಬ್ರಿಟನ್‌ನಲ್ಲಿ ಉನ್ನತ ಪದವಿ ನೀಡಿರುವುದು ಭಾರತದಲ್ಲಿ ವಿರೋಧ ಪಕ್ಷಗಳಿಗೆ ಮಿರ್ಚಿ ಇಟ್ಟಂತಾಗಿದೆ. ಇದೇ ಅಸ್ತ್ರ ಹಿಡಿದು ಕಾಂಗ್ರೆಸ್‌, ಬಿಜೆಪಿಯನ್ನು ಟೀಕೆ ಮಾಡಿದೆ.  ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರು ಭರ್ಜರಿಯಾಗಿ ತಿರುಗೇಟು ನೀಡಿದ್ದು, ಭಾರತದಲ್ಲಿ ಅಲ್ಪ ಸಂಖ್ಯಾತರಿಗೆ ಉನ್ನತ ಹುದ್ದೆ ಸಿಕ್ಕೇ ಇಲ್ವಾ ಎಂದು ಪ್ರಶ್ನೆ ಮಾಡಿ, ಅದರ ದೊಡ್ಡ ಲಿಸ್ಟ್‌ ಅನ್ನೇ ಬಿಡುಗಡೆ ಮಾಡಿದೆ.

ಭಾರತದ ದೇಶದ ವೈವಿಧ್ಯತೆ ಸಂಸ್ಕೃತಿಯನ್ನೂ ದುರ್ಬಲಗೊಳಿಸುವ, ಅಸಹಿಷ್ಣುತೆ ವಾತಾವರಣ ನಿರ್ಮಾಣಕ್ಕೆ ಬಲಪಂಥೀಯರ ಸಂಚು ನಡೆಯುತ್ತಿದೆ. ಬ್ರಿಟನ್ ರಾಜಕೀಯ ಬೆಳವಣಿಗೆ ಭಾರತ ರಾಜಕೀಯ ಪಾಠ ಕಲಿಬೇಕಿದೆ. ಅಲ್ಪಸಂಖ್ಯಾತ ಪ್ರಜೆಗಳಿಗೆ ಅತ್ಯುನ್ನತ ಅಧಿಕಾರ ನೀಡುವ ಅಮೆರಿಕ, ಬ್ರಿಟನ್ ಔದಾರ್ಯ ನಮ್ಮಲ್ಲೂ ಬರಲಿ. ನಮ್ಮಲ್ಲಿ ಧಾರ್ಮಿಕ ಬಹುಸಂಖ್ಯಾತರಿಂದ ಅಧಿಕಾರ ದಬ್ಬಾಳಿಕೆ ಮುಂದುವರಿದಿದೆ' ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಟ್ವೀಟ್‌ ಮಾಡಿದ್ದರು.

ಬೆಂಗ್ಳೂರಿಗೆ ಬಂದಾಗ ವಿದ್ಯಾರ್ಥಿ ಭವನದ ದೋಸೆ ಸವಿದಿದ್ದ ರಿಷಿ ಸುನಕ್‌..!

ಇನ್ನು ಶಶಿ ತರೂರ್‌ ಹಾಗೂ ಮೆಹಬೂಬಾ ಮುಫ್ತಿ ಕೂಡ ಇದೇ ಅರ್ಥದಲ್ಲಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ನಾಯಕರು ಬಹುಸಮಖ್ಯಾತರ ಬಗ್ಗೆ ಹೈಪರ್ ಆ್ಯಕ್ಟೀವ್ ಆಗಿದ್ದಾರೆ. ಭಾರತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 10 ವರ್ಷ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ 5 ವರ್ಷಗಳ ಅಧಿಕಾರ ನೀಡಿದೆ ಎಂದು ರವಿಶಂಕರ್‌ ಪ್ರಸಾದ್‌ ಉತ್ತರ ನೀಡಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more