ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

ಬಿಜೆಪಿ, ಕಾಂಗ್ರೆಸ್‌ ನಡುವೆ 'ಅಲ್ಪಸಂಖ್ಯಾತ ಉನ್ನತ ಹುದ್ದೆ' ವಾರ್‌

Published : Oct 26, 2022, 11:13 PM IST

ಬ್ರಿಟನ್‌ನಲ್ಲಿ ಅಲ್ಪಸಂಖ್ಯಾತ ಹಿಂದೂಗೆ ಪ್ರಧಾನಿ ಪಟ್ಟ ನೀಡಿರುವುದು, ದೇಶದಲ್ಲಿ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಇದೇ ಅಸ್ತ್ರ ಹಿಡಿದು ಬಿಜೆಪಿ ವಿರುದ್ಧ ಕಾಂಗ್ರೆಸ್ ಚಾಟಿ ಬೀಸಿದೆ. ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರೂ ಕೆಂಡಾಮಂಡಲರಾಗಿದ್ದಾರೆ. ಭಾರತದಲ್ಲಿ ಅಲ್ಪಸಂಖ್ಯಾತ ಅತ್ಯುನ್ನತ ಹುದ್ದೆ ಸಿಕ್ಕಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು (ಅ. 26): ಬ್ರಿಟನ್ ದೇಶದಲ್ಲಿ ರಿಷಿ ಸುನಕ್‌ ಪ್ರಧಾನಿಯಾಗಿ ತಮ್ಮ ಅಧಿಕಾರ ಆರಂಭಿಸಿದ್ದಾರೆ. ಅಲ್ಪ ಸಂಖ್ಯಾತ ಹಿಂದುವಿಗೆ ಬ್ರಿಟನ್‌ನಲ್ಲಿ ಉನ್ನತ ಪದವಿ ನೀಡಿರುವುದು ಭಾರತದಲ್ಲಿ ವಿರೋಧ ಪಕ್ಷಗಳಿಗೆ ಮಿರ್ಚಿ ಇಟ್ಟಂತಾಗಿದೆ. ಇದೇ ಅಸ್ತ್ರ ಹಿಡಿದು ಕಾಂಗ್ರೆಸ್‌, ಬಿಜೆಪಿಯನ್ನು ಟೀಕೆ ಮಾಡಿದೆ.  ಕಾಂಗ್ರೆಸ್ ಟೀಕೆಗೆ ಬಿಜೆಪಿ ನಾಯಕರು ಭರ್ಜರಿಯಾಗಿ ತಿರುಗೇಟು ನೀಡಿದ್ದು, ಭಾರತದಲ್ಲಿ ಅಲ್ಪ ಸಂಖ್ಯಾತರಿಗೆ ಉನ್ನತ ಹುದ್ದೆ ಸಿಕ್ಕೇ ಇಲ್ವಾ ಎಂದು ಪ್ರಶ್ನೆ ಮಾಡಿ, ಅದರ ದೊಡ್ಡ ಲಿಸ್ಟ್‌ ಅನ್ನೇ ಬಿಡುಗಡೆ ಮಾಡಿದೆ.

ಭಾರತದ ದೇಶದ ವೈವಿಧ್ಯತೆ ಸಂಸ್ಕೃತಿಯನ್ನೂ ದುರ್ಬಲಗೊಳಿಸುವ, ಅಸಹಿಷ್ಣುತೆ ವಾತಾವರಣ ನಿರ್ಮಾಣಕ್ಕೆ ಬಲಪಂಥೀಯರ ಸಂಚು ನಡೆಯುತ್ತಿದೆ. ಬ್ರಿಟನ್ ರಾಜಕೀಯ ಬೆಳವಣಿಗೆ ಭಾರತ ರಾಜಕೀಯ ಪಾಠ ಕಲಿಬೇಕಿದೆ. ಅಲ್ಪಸಂಖ್ಯಾತ ಪ್ರಜೆಗಳಿಗೆ ಅತ್ಯುನ್ನತ ಅಧಿಕಾರ ನೀಡುವ ಅಮೆರಿಕ, ಬ್ರಿಟನ್ ಔದಾರ್ಯ ನಮ್ಮಲ್ಲೂ ಬರಲಿ. ನಮ್ಮಲ್ಲಿ ಧಾರ್ಮಿಕ ಬಹುಸಂಖ್ಯಾತರಿಂದ ಅಧಿಕಾರ ದಬ್ಬಾಳಿಕೆ ಮುಂದುವರಿದಿದೆ' ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಟ್ವೀಟ್‌ ಮಾಡಿದ್ದರು.

ಬೆಂಗ್ಳೂರಿಗೆ ಬಂದಾಗ ವಿದ್ಯಾರ್ಥಿ ಭವನದ ದೋಸೆ ಸವಿದಿದ್ದ ರಿಷಿ ಸುನಕ್‌..!

ಇನ್ನು ಶಶಿ ತರೂರ್‌ ಹಾಗೂ ಮೆಹಬೂಬಾ ಮುಫ್ತಿ ಕೂಡ ಇದೇ ಅರ್ಥದಲ್ಲಿ ಟ್ವೀಟ್‌ ಮಾಡಿದ್ದರು. ಇದಕ್ಕೆ ಬಿಜೆಪಿ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವು ನಾಯಕರು ಬಹುಸಮಖ್ಯಾತರ ಬಗ್ಗೆ ಹೈಪರ್ ಆ್ಯಕ್ಟೀವ್ ಆಗಿದ್ದಾರೆ. ಭಾರತದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ 10 ವರ್ಷ. ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ 5 ವರ್ಷಗಳ ಅಧಿಕಾರ ನೀಡಿದೆ ಎಂದು ರವಿಶಂಕರ್‌ ಪ್ರಸಾದ್‌ ಉತ್ತರ ನೀಡಿದ್ದಾರೆ.

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more