ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

Published : Apr 24, 2025, 04:20 PM IST

ಪಾಕಿಸ್ತಾನ ಸೇನಾ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್, ಹಿಂದೂಗಳಿಂದ ತಾವು ಸಂಪೂರ್ಣವಾಗಿ ಭಿನ್ನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕಾಶ್ಮೀರ ಪಾಕಿಸ್ತಾನದ ರಕ್ತನಾಳದಂತೆ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಖಂಡನೆಗೆ ಗುರಿಯಾಗಿವೆ.

ಪಾಕಿಸ್ತಾನ ಸೇನೆಯ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್ ತಮ್ಮ ವಿವಾದಾಸ್ಪದ ಭಾಷಣದ ಮೂಲಕ ದೇಶದ ನಿಜಬಣ್ಣವನ್ನೇ ಬಹಿರಂಗಪಡಿಸಿದ್ದಾರೆ. ಸಾಗರೋತ್ತರ ಪಾಕಿಸ್ತಾನಿಗಳ ಸಭೆಯಲ್ಲಿ ಮಾತನಾಡಿದ ಮುನೀರ್, 'ನಾವು ಹಿಂದೂಗಳಿಂದ ಸಂಪೂರ್ಣವಾಗಿ ವಿಭಿನ್ನ. ಇದೇ ಎರಡು ರಾಷ್ಟ್ರ ಸಿದ್ಧಾಂತದ ಆಧಾರ' ಎಂದು ಹೇಳಿದ್ದಾರೆ. ಅಲ್ಲದೆ, 'ಕಾಶ್ಮೀರ ನಮ್ಮ ರಕ್ತನಾಳದಂತೆ' ಎಂದು ಹೇಳುವ ಮೂಲಕ ಕಾಶ್ಮೀರದ ಮೇಲೆ ಪಾಕಿಸ್ತಾನದ ಆಸೆಯನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ. ಪಾಕಿಸ್ತಾನದ ಹಿಂದೂ ವಿರೋಧಿ ನಿಲುವು ಮತ್ತು ಕಾಶ್ಮೀರ ಆಕ್ರಮಣಶೀಲತೆಯು ಮತ್ತೆ ಬೆಳಕಿಗೆ ಬಂದಿದೆ.

ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಹಿಂದೂ ನರಮೇಧ ಕೃತ್ಯದಲ್ಲಿ ಪಾಕಿಸ್ತಾನ ಸೇನೆಯ ಕೈವಾಡ ಇಲ್ಲದೇ ನಡೆದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲಿಯೇ ಕಾಶ್ಮೀರದ ಘಟನೆಯನ್ನು ಖಂಡಿಸದೇ ಉಗ್ರರಿಗೆ ಬೆಂಬಲ ನೀಡುವಂತಹ ಹೇಳಿಕೆಗಳನ್ನು ಪಾಕಿಸ್ತಾನ ಸೇನೆ ಮುಖ್ಯಸ್ಥ ನೀಡುತ್ತಿದ್ದಾನೆ. ಇನ್ನು ಪಾಕಿಸ್ತಾನ ರಕ್ಷಣಾ ಸಚಿವೆಯೂ ಕೂಡ ಭಾರತವೇನಾದರೂ ದಾಳಿ ಮಾಡಿದಲ್ಲಿ ಪಾಕಿಸ್ತಾನವೂ ತಕ್ಕ ಪ್ರತಿದಾಳಿಯ ಮೂಲಕ ಉತ್ತರ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಭಾರತದ ಮೇಲೆ ಕಾಲ್ಕೆರೆದು ಯುದ್ಧ ಮಾಡುವುದಕ್ಕೆಂದೇ ಸಿದ್ಧವಾದಂತೆ ಕಾಣುತ್ತಿದೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more