ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

Published : Apr 24, 2025, 04:20 PM IST

ಪಾಕಿಸ್ತಾನ ಸೇನಾ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್, ಹಿಂದೂಗಳಿಂದ ತಾವು ಸಂಪೂರ್ಣವಾಗಿ ಭಿನ್ನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕಾಶ್ಮೀರ ಪಾಕಿಸ್ತಾನದ ರಕ್ತನಾಳದಂತೆ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಖಂಡನೆಗೆ ಗುರಿಯಾಗಿವೆ.

ಪಾಕಿಸ್ತಾನ ಸೇನೆಯ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್ ತಮ್ಮ ವಿವಾದಾಸ್ಪದ ಭಾಷಣದ ಮೂಲಕ ದೇಶದ ನಿಜಬಣ್ಣವನ್ನೇ ಬಹಿರಂಗಪಡಿಸಿದ್ದಾರೆ. ಸಾಗರೋತ್ತರ ಪಾಕಿಸ್ತಾನಿಗಳ ಸಭೆಯಲ್ಲಿ ಮಾತನಾಡಿದ ಮುನೀರ್, 'ನಾವು ಹಿಂದೂಗಳಿಂದ ಸಂಪೂರ್ಣವಾಗಿ ವಿಭಿನ್ನ. ಇದೇ ಎರಡು ರಾಷ್ಟ್ರ ಸಿದ್ಧಾಂತದ ಆಧಾರ' ಎಂದು ಹೇಳಿದ್ದಾರೆ. ಅಲ್ಲದೆ, 'ಕಾಶ್ಮೀರ ನಮ್ಮ ರಕ್ತನಾಳದಂತೆ' ಎಂದು ಹೇಳುವ ಮೂಲಕ ಕಾಶ್ಮೀರದ ಮೇಲೆ ಪಾಕಿಸ್ತಾನದ ಆಸೆಯನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ. ಪಾಕಿಸ್ತಾನದ ಹಿಂದೂ ವಿರೋಧಿ ನಿಲುವು ಮತ್ತು ಕಾಶ್ಮೀರ ಆಕ್ರಮಣಶೀಲತೆಯು ಮತ್ತೆ ಬೆಳಕಿಗೆ ಬಂದಿದೆ.

ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಹಿಂದೂ ನರಮೇಧ ಕೃತ್ಯದಲ್ಲಿ ಪಾಕಿಸ್ತಾನ ಸೇನೆಯ ಕೈವಾಡ ಇಲ್ಲದೇ ನಡೆದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲಿಯೇ ಕಾಶ್ಮೀರದ ಘಟನೆಯನ್ನು ಖಂಡಿಸದೇ ಉಗ್ರರಿಗೆ ಬೆಂಬಲ ನೀಡುವಂತಹ ಹೇಳಿಕೆಗಳನ್ನು ಪಾಕಿಸ್ತಾನ ಸೇನೆ ಮುಖ್ಯಸ್ಥ ನೀಡುತ್ತಿದ್ದಾನೆ. ಇನ್ನು ಪಾಕಿಸ್ತಾನ ರಕ್ಷಣಾ ಸಚಿವೆಯೂ ಕೂಡ ಭಾರತವೇನಾದರೂ ದಾಳಿ ಮಾಡಿದಲ್ಲಿ ಪಾಕಿಸ್ತಾನವೂ ತಕ್ಕ ಪ್ರತಿದಾಳಿಯ ಮೂಲಕ ಉತ್ತರ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಭಾರತದ ಮೇಲೆ ಕಾಲ್ಕೆರೆದು ಯುದ್ಧ ಮಾಡುವುದಕ್ಕೆಂದೇ ಸಿದ್ಧವಾದಂತೆ ಕಾಣುತ್ತಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more