ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

Published : Apr 24, 2025, 04:20 PM IST

ಪಾಕಿಸ್ತಾನ ಸೇನಾ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್, ಹಿಂದೂಗಳಿಂದ ತಾವು ಸಂಪೂರ್ಣವಾಗಿ ಭಿನ್ನ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಕಾಶ್ಮೀರ ಪಾಕಿಸ್ತಾನದ ರಕ್ತನಾಳದಂತೆ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಖಂಡನೆಗೆ ಗುರಿಯಾಗಿವೆ.

ಪಾಕಿಸ್ತಾನ ಸೇನೆಯ ಮುಖ್ಯಸ್ಥ ಸೈಯದ್ ಆಸೀಮ್ ಮುನೀರ್ ತಮ್ಮ ವಿವಾದಾಸ್ಪದ ಭಾಷಣದ ಮೂಲಕ ದೇಶದ ನಿಜಬಣ್ಣವನ್ನೇ ಬಹಿರಂಗಪಡಿಸಿದ್ದಾರೆ. ಸಾಗರೋತ್ತರ ಪಾಕಿಸ್ತಾನಿಗಳ ಸಭೆಯಲ್ಲಿ ಮಾತನಾಡಿದ ಮುನೀರ್, 'ನಾವು ಹಿಂದೂಗಳಿಂದ ಸಂಪೂರ್ಣವಾಗಿ ವಿಭಿನ್ನ. ಇದೇ ಎರಡು ರಾಷ್ಟ್ರ ಸಿದ್ಧಾಂತದ ಆಧಾರ' ಎಂದು ಹೇಳಿದ್ದಾರೆ. ಅಲ್ಲದೆ, 'ಕಾಶ್ಮೀರ ನಮ್ಮ ರಕ್ತನಾಳದಂತೆ' ಎಂದು ಹೇಳುವ ಮೂಲಕ ಕಾಶ್ಮೀರದ ಮೇಲೆ ಪಾಕಿಸ್ತಾನದ ಆಸೆಯನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಗಳು ಭಾರತದಲ್ಲಿ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿವೆ. ಪಾಕಿಸ್ತಾನದ ಹಿಂದೂ ವಿರೋಧಿ ನಿಲುವು ಮತ್ತು ಕಾಶ್ಮೀರ ಆಕ್ರಮಣಶೀಲತೆಯು ಮತ್ತೆ ಬೆಳಕಿಗೆ ಬಂದಿದೆ.

ಕಾಶ್ಮೀರದಲ್ಲಿ ನಡೆದ ಉಗ್ರಗಾಮಿಗಳ ಹಿಂದೂ ನರಮೇಧ ಕೃತ್ಯದಲ್ಲಿ ಪಾಕಿಸ್ತಾನ ಸೇನೆಯ ಕೈವಾಡ ಇಲ್ಲದೇ ನಡೆದಿಲ್ಲ ಎಂಬ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲಿಯೇ ಕಾಶ್ಮೀರದ ಘಟನೆಯನ್ನು ಖಂಡಿಸದೇ ಉಗ್ರರಿಗೆ ಬೆಂಬಲ ನೀಡುವಂತಹ ಹೇಳಿಕೆಗಳನ್ನು ಪಾಕಿಸ್ತಾನ ಸೇನೆ ಮುಖ್ಯಸ್ಥ ನೀಡುತ್ತಿದ್ದಾನೆ. ಇನ್ನು ಪಾಕಿಸ್ತಾನ ರಕ್ಷಣಾ ಸಚಿವೆಯೂ ಕೂಡ ಭಾರತವೇನಾದರೂ ದಾಳಿ ಮಾಡಿದಲ್ಲಿ ಪಾಕಿಸ್ತಾನವೂ ತಕ್ಕ ಪ್ರತಿದಾಳಿಯ ಮೂಲಕ ಉತ್ತರ ಕೊಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ಭಾರತದ ಮೇಲೆ ಕಾಲ್ಕೆರೆದು ಯುದ್ಧ ಮಾಡುವುದಕ್ಕೆಂದೇ ಸಿದ್ಧವಾದಂತೆ ಕಾಣುತ್ತಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more