ಕರಿನೀರ ಶಿಕ್ಷೆಯ ಕರಾಳತೆಯನ್ನು ಅನುಭವಿಸಿದ್ದ ದೇಶಭಕ್ತ ಸಾವರ್ಕರ್‌!

ಕರಿನೀರ ಶಿಕ್ಷೆಯ ಕರಾಳತೆಯನ್ನು ಅನುಭವಿಸಿದ್ದ ದೇಶಭಕ್ತ ಸಾವರ್ಕರ್‌!

Published : Aug 16, 2022, 01:21 PM ISTUpdated : Aug 16, 2022, 01:22 PM IST

ಸಾವರ್ಕರ್ ಅವರು ಬ್ರಿಟಿಷರಿಗೆ ಕ್ಷಮಾಪಣಾ ಅರ್ಜಿ ಬರೆದು ಕೊಟ್ಟಿದ್ರು ಅಂತ ಕಾಂಗ್ರೆಸ್ ನಾಯಕರು ಆರೋಪಿಸ್ತಾರೆ. ಹಾಗಾದ್ರೆ ಅಂಡಮಾನ್ ಜೈಲಿನಲ್ಲಿ ಕಾಲಾಪಾನಿ ಶಿಕ್ಷೆ ಅನುಭವಿಸುತ್ತಿದ್ದ ಸಾವರ್ಕರ್, ಕ್ಷಮಾಪಣೆಯ ಅರ್ಜಿ ಬರೆದಿದ್ದು ಯಾಕೆ..? ಅವತ್ತು ಸಾವರ್ಕರ್ ಅವರ ಮನಸ್ಸಿನಲ್ಲಿದ್ದದ್ದೇನು..? 
 

ಬೆಂಗಳೂರು (ಅ. 16): ವೀರ್‌ ಸಾವರ್ಕರ್‌ ವಿಚಾರವಾಗಿ ರಾಜ್ಯದಲ್ಲಿ ವಾಕ್ಸಮರ, ಅಹಿತಕರ ಘಟನೆಗಳು ನಡೆಯುತ್ತಿವೆ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ವ್ಯಕ್ತಿ ಎಂದು ಕಾಂಗ್ರೆಸ್‌  ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂಷಣೆ ಮಾಡುತ್ತಿದೆ. ಹಾಗಿದ್ದಲ್ಲಿ, ಅಪ್ರತಿಮ ಸ್ವಾತಂತ್ರ್ಯವೀರನ ಬೆಚ್ಚಿ ಬೀಳಿಸುವ ಅಸಲಿ ಚರಿತ್ರೆ ಏನು ಎನ್ನುವುದರ ರಿಪೋರ್ಟ್‌.

ಸಾವರ್ಕರ್‌ ಬರೆದಿದ್ದ ಒಂದೇ ಒಂದು ಪುಸ್ತಕಕ್ಕೆ ಬೆಚ್ಚಿಬಿದ್ದಿದ್ದ ಬ್ರಿಟಿಷರು ಅವರಿಗೆ, ಭೂಲೋಕದ ನರಕ ಎಂದೇ ಹೇಳಲಾಗುವ ಅಂಡಾಮಾನ್‌ನಲ್ಲಿ ಕರಿನೀರ ಶಿಕ್ಷೆ ವಿಧಿಸಿದ್ದರು. 13 ವರ್ಷ ಈ ಕರಾಳ ಲೋಕದಲ್ಲಿ ನಲುಗಿದ್ದರು ಸಾವರ್ಕರ್‌. ಇಂಥ ಸಾವರ್ಕರ್‌ ಕಾಂಗ್ರೆಸ್‌ ಕಣ್ಣಲ್ಲಿ ಹೇಡಿಯಂತೆ ಕಾಣುತ್ತಿರೋದೇಕೆ? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆಯ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಿದೆ.

'ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಗಾಂಧೀಜಿ'

ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದವರು ಸಾವರ್ಕರ್. ಅವರ ಹೋರಾಟದ ಹಾದಿಯೇ ವಿಭಿನ್ನ. ಆ ಹಾದಿಯಲ್ಲಿ ಕಷ್ಟಪಟ್ಟು ಗಳಿಸಿದ್ದೆಲ್ಲವನ್ನೂ ಸಾವರ್ಕರ್ ಕಳೆದುಕೊಂಡು ಬಿಟ್ಟಿದ್ದರು. ದೇಶಕ್ಕೆ ಸ್ವಾತಂತ್ರ್ಯ ಲಕ್ಷಾಂತರ ಕ್ರಾಂತಿಕಾರಿಗಳ ಬಲಿದಾನವಾಗಿತ್ತು.  ಅಂತಹ ಕ್ರಾಂತಿಕಾರಿಗಳಲ್ಲಿ ಒಬ್ಬರು ವಿನಾಯಕ ದಾಮೋದರ್ ಸಾವರ್ಕರ್. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಲ್ಲಿ, ಅವರ ಬಲಿದಾನವನ್ನು ನೆನೆಯುವುದು ಪ್ರತಿಯೊಬ್ಬ ದೇಶಭಕ್ತರ ಕರ್ತವ್ಯ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more