ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

Published : Aug 11, 2022, 01:41 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಕಸಗುಡಿಸುವವರು, ತೋಟಗಾರರು ಮತ್ತು ಇತರ ಉದ್ಯೋಗಿಗಳ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು.
 

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದರು. ಚಿಕ್ಕ ಹುಡುಗಿಯರು ಪ್ರಧಾನಿಯವರ ಕೈಗೆ ರಾಖಿ ಕಟ್ಟಿದರು. ಈ ವೇಳೆ ನರೇಂದ್ರ ಮೋದಿ ಅವರು ಮಕ್ಕಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದವನ್ನು ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ವಿಶೇಷವಾಗಿ ಪ್ರಧಾನಿ ಮೋದಿ ಮಾತನಾಡಿದರು. ನೀನು ಎಲ್ಲಿ ಓದುತ್ತಿದ್ದೀಯ, ನಿನಗೆ ಏನು ಇಷ್ಟ, ನಿನ್ನ ಹೆಸರೇನು ಎಂದೆಲ್ಲಾ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು.

ಪ್ರಧಾನಿ ಪದವಿಯ ಘನತೆ ಕುಗ್ಗಿಸಬೇಡಿ, ಮೋದಿಗೆ ರಾಹುಲ್‌ ಗಾಂಧಿ ಟಾಂಗ್!

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು. ಸುಮಾರು ಎರಡು ಡಜನ್ ಹುಡುಗಿಯರು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು,. ಇದರಿಂದಾಗಿ ಪ್ರಧಾನಿ ಮೋದಿ ಕೈ ರಾಖಿಗಳಿಂದ ತುಂಬಿಹೋಗಿತ್ತು. ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?