ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

Published : Aug 11, 2022, 01:41 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಕಸಗುಡಿಸುವವರು, ತೋಟಗಾರರು ಮತ್ತು ಇತರ ಉದ್ಯೋಗಿಗಳ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು.
 

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದರು. ಚಿಕ್ಕ ಹುಡುಗಿಯರು ಪ್ರಧಾನಿಯವರ ಕೈಗೆ ರಾಖಿ ಕಟ್ಟಿದರು. ಈ ವೇಳೆ ನರೇಂದ್ರ ಮೋದಿ ಅವರು ಮಕ್ಕಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದವನ್ನು ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ವಿಶೇಷವಾಗಿ ಪ್ರಧಾನಿ ಮೋದಿ ಮಾತನಾಡಿದರು. ನೀನು ಎಲ್ಲಿ ಓದುತ್ತಿದ್ದೀಯ, ನಿನಗೆ ಏನು ಇಷ್ಟ, ನಿನ್ನ ಹೆಸರೇನು ಎಂದೆಲ್ಲಾ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು.

ಪ್ರಧಾನಿ ಪದವಿಯ ಘನತೆ ಕುಗ್ಗಿಸಬೇಡಿ, ಮೋದಿಗೆ ರಾಹುಲ್‌ ಗಾಂಧಿ ಟಾಂಗ್!

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು. ಸುಮಾರು ಎರಡು ಡಜನ್ ಹುಡುಗಿಯರು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು,. ಇದರಿಂದಾಗಿ ಪ್ರಧಾನಿ ಮೋದಿ ಕೈ ರಾಖಿಗಳಿಂದ ತುಂಬಿಹೋಗಿತ್ತು. ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು