ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

Published : Aug 11, 2022, 01:41 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಕಸಗುಡಿಸುವವರು, ತೋಟಗಾರರು ಮತ್ತು ಇತರ ಉದ್ಯೋಗಿಗಳ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು.
 

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದರು. ಚಿಕ್ಕ ಹುಡುಗಿಯರು ಪ್ರಧಾನಿಯವರ ಕೈಗೆ ರಾಖಿ ಕಟ್ಟಿದರು. ಈ ವೇಳೆ ನರೇಂದ್ರ ಮೋದಿ ಅವರು ಮಕ್ಕಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದವನ್ನು ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ವಿಶೇಷವಾಗಿ ಪ್ರಧಾನಿ ಮೋದಿ ಮಾತನಾಡಿದರು. ನೀನು ಎಲ್ಲಿ ಓದುತ್ತಿದ್ದೀಯ, ನಿನಗೆ ಏನು ಇಷ್ಟ, ನಿನ್ನ ಹೆಸರೇನು ಎಂದೆಲ್ಲಾ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು.

ಪ್ರಧಾನಿ ಪದವಿಯ ಘನತೆ ಕುಗ್ಗಿಸಬೇಡಿ, ಮೋದಿಗೆ ರಾಹುಲ್‌ ಗಾಂಧಿ ಟಾಂಗ್!

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು. ಸುಮಾರು ಎರಡು ಡಜನ್ ಹುಡುಗಿಯರು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು,. ಇದರಿಂದಾಗಿ ಪ್ರಧಾನಿ ಮೋದಿ ಕೈ ರಾಖಿಗಳಿಂದ ತುಂಬಿಹೋಗಿತ್ತು. ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?