ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

Published : Aug 11, 2022, 01:41 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಕಸಗುಡಿಸುವವರು, ತೋಟಗಾರರು ಮತ್ತು ಇತರ ಉದ್ಯೋಗಿಗಳ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು.
 

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದರು. ಚಿಕ್ಕ ಹುಡುಗಿಯರು ಪ್ರಧಾನಿಯವರ ಕೈಗೆ ರಾಖಿ ಕಟ್ಟಿದರು. ಈ ವೇಳೆ ನರೇಂದ್ರ ಮೋದಿ ಅವರು ಮಕ್ಕಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದವನ್ನು ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ವಿಶೇಷವಾಗಿ ಪ್ರಧಾನಿ ಮೋದಿ ಮಾತನಾಡಿದರು. ನೀನು ಎಲ್ಲಿ ಓದುತ್ತಿದ್ದೀಯ, ನಿನಗೆ ಏನು ಇಷ್ಟ, ನಿನ್ನ ಹೆಸರೇನು ಎಂದೆಲ್ಲಾ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು.

ಪ್ರಧಾನಿ ಪದವಿಯ ಘನತೆ ಕುಗ್ಗಿಸಬೇಡಿ, ಮೋದಿಗೆ ರಾಹುಲ್‌ ಗಾಂಧಿ ಟಾಂಗ್!

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು. ಸುಮಾರು ಎರಡು ಡಜನ್ ಹುಡುಗಿಯರು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು,. ಇದರಿಂದಾಗಿ ಪ್ರಧಾನಿ ಮೋದಿ ಕೈ ರಾಖಿಗಳಿಂದ ತುಂಬಿಹೋಗಿತ್ತು. ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!