ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

Published : Aug 11, 2022, 01:41 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಕಸಗುಡಿಸುವವರು, ತೋಟಗಾರರು ಮತ್ತು ಇತರ ಉದ್ಯೋಗಿಗಳ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು.
 

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದರು. ಚಿಕ್ಕ ಹುಡುಗಿಯರು ಪ್ರಧಾನಿಯವರ ಕೈಗೆ ರಾಖಿ ಕಟ್ಟಿದರು. ಈ ವೇಳೆ ನರೇಂದ್ರ ಮೋದಿ ಅವರು ಮಕ್ಕಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದವನ್ನು ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ವಿಶೇಷವಾಗಿ ಪ್ರಧಾನಿ ಮೋದಿ ಮಾತನಾಡಿದರು. ನೀನು ಎಲ್ಲಿ ಓದುತ್ತಿದ್ದೀಯ, ನಿನಗೆ ಏನು ಇಷ್ಟ, ನಿನ್ನ ಹೆಸರೇನು ಎಂದೆಲ್ಲಾ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು.

ಪ್ರಧಾನಿ ಪದವಿಯ ಘನತೆ ಕುಗ್ಗಿಸಬೇಡಿ, ಮೋದಿಗೆ ರಾಹುಲ್‌ ಗಾಂಧಿ ಟಾಂಗ್!

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು. ಸುಮಾರು ಎರಡು ಡಜನ್ ಹುಡುಗಿಯರು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು,. ಇದರಿಂದಾಗಿ ಪ್ರಧಾನಿ ಮೋದಿ ಕೈ ರಾಖಿಗಳಿಂದ ತುಂಬಿಹೋಗಿತ್ತು. ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?