ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

ವಿಶೇಷವಾಗಿ ರಕ್ಷಾಬಂಧನ ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ!

Published : Aug 11, 2022, 01:41 PM IST

ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಾಬಂಧನವನ್ನು ವಿಶೇಷ ರೀತಿಯಲ್ಲಿ ಆಚರಿಸಿದರು. ಪ್ರಧಾನಿ ಕಚೇರಿಯಲ್ಲಿ ಕೆಲಸ ಮಾಡುವ ಕಸಗುಡಿಸುವವರು, ತೋಟಗಾರರು ಮತ್ತು ಇತರ ಉದ್ಯೋಗಿಗಳ ಪುತ್ರಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು.
 

ನವದೆಹಲಿ (ಆ. 11): ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಕ್ಷಾಬಂಧನ ಹಬ್ಬವನ್ನು ಅತ್ಯಂತ ವಿಶೇಷ ರೀತಿಯಲ್ಲಿ ಆಚರಿಸಿದರು. ಚಿಕ್ಕ ಹುಡುಗಿಯರು ಪ್ರಧಾನಿಯವರ ಕೈಗೆ ರಾಖಿ ಕಟ್ಟಿದರು. ಈ ವೇಳೆ ನರೇಂದ್ರ ಮೋದಿ ಅವರು ಮಕ್ಕಳ ತಲೆಯ ಮೇಲೆ ಕೈಯಿಟ್ಟು ಆಶೀರ್ವಾದವನ್ನು ಮಾಡಿದರು.

ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ಕೆಲಸ ಮಾಡುವ ಕಸಗುಡಿಸುವವರು, ಜವಾನರು, ತೋಟದ ಮಾಲಿಗಳು, ಚಾಲಕರು ಮತ್ತು ಇತರ ಉದ್ಯೋಗಿಗಳ ಹೆಣ್ಣುಮಕ್ಕಳು ನರೇಂದ್ರ ಮೋದಿಯವರಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಬಂದಿದ್ದರು. ಕೈಗೆ ರಾಖಿ ಕಟ್ಟಲು ಬಂದ ಪ್ರತಿ ಹುಡುಗಿಯರನ್ನು ವಿಶೇಷವಾಗಿ ಪ್ರಧಾನಿ ಮೋದಿ ಮಾತನಾಡಿದರು. ನೀನು ಎಲ್ಲಿ ಓದುತ್ತಿದ್ದೀಯ, ನಿನಗೆ ಏನು ಇಷ್ಟ, ನಿನ್ನ ಹೆಸರೇನು ಎಂದೆಲ್ಲಾ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದರು.

ಪ್ರಧಾನಿ ಪದವಿಯ ಘನತೆ ಕುಗ್ಗಿಸಬೇಡಿ, ಮೋದಿಗೆ ರಾಹುಲ್‌ ಗಾಂಧಿ ಟಾಂಗ್!

ನರೇಂದ್ರ ಮೋದಿಯವರಿಗೆ ರಾಖಿ ಕಟ್ಟುವ ಮೂಲಕ ಹುಡುಗಿಯರು ಸಂಭ್ರಮಿಸಿದರು. ಸುಮಾರು ಎರಡು ಡಜನ್ ಹುಡುಗಿಯರು ಪ್ರಧಾನಿಗೆ ರಾಖಿಗಳನ್ನು ಕಟ್ಟಿದರು,. ಇದರಿಂದಾಗಿ ಪ್ರಧಾನಿ ಮೋದಿ ಕೈ ರಾಖಿಗಳಿಂದ ತುಂಬಿಹೋಗಿತ್ತು. ಎಲ್ಲಾ ಬಾಲಕಿಯರಿಗೂ ಪ್ರಧಾನಿ ಮೋದಿ ಸಿಹಿಯನ್ನೂ ತಿನ್ನಿಸಿದರು. ಇದರ ನಡುವೆ ಪ್ರಧಾನಿಯವರು ರಕ್ಷಾ ಬಂಧನದಂದು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ. ನಿಮಗೆಲ್ಲರಿಗೂ ರಕ್ಷಾಬಂಧನದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?