ರಾಮಮಂದಿರ ಲೋಕಾರ್ಪಣೆಗೆ ಕೂಡಿ ಬಂದ ಶುಭ ಮುಹೂರ್ತ: ಉದ್ಘಾಟನೆ ಯಾವಾಗ ಗೊತ್ತಾ ?

ರಾಮಮಂದಿರ ಲೋಕಾರ್ಪಣೆಗೆ ಕೂಡಿ ಬಂದ ಶುಭ ಮುಹೂರ್ತ: ಉದ್ಘಾಟನೆ ಯಾವಾಗ ಗೊತ್ತಾ ?

Published : Oct 26, 2023, 10:26 AM IST

ವಿಶ್ವದಾದ್ಯಂತ ಕುತೂಹಲದಿಂದ ಎದುರು ನೋಡ್ತಿದ್ದ ಅಯೋದ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಾಗಿದೆ. ರಾಮಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ.

ಹಲವು ದಶಕಗಳ ವಿವಾದ ಬಗೆಹರಿದ ಬಳಿಕ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ತಲೆಎತ್ತಿ ನಿಂತಿದೆ. ಇಷ್ಟು ದಿನ ದೇಶದ ಹಿಂದೂಗಳೆಲ್ಲ ಕಾತದಿಂದ  ಕಾಯ್ತಾ ಇದ್ದ ರಾಮಮಂದಿರದ(Ram Temple) ಉದ್ಘಾಟನಾ ಸಮಯ ಬಂದೇ ಬಿಟ್ಟಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ(Ayodhya) ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರವನ್ನು 2024ರ ಜನವರಿ 22ರಂದು ಮಧ್ಯಾಹ್ನ 12:30ಕ್ಕೆ ಉದ್ಘಾಟಿಸಲಾಗುವುದು. ಅಂದು ರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಲು ಮುಹೂರ್ಥ ಫಿಕ್ಸ್ ಮಾಡಲಾಗಿದೆ. ಜನವರಿ 21ರಿಂದ 24ರವರೆಗೆ ರಾಮಲಲ್ಲಾವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಕಾರ್ಯ ಜರುಗಲಿದೆ. ಜನವರಿ 22ರಂದು ಗರ್ಭಗೃಹದಲ್ಲಿ ರಾಮ(Rama) ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.  ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಖಚಿತಪಡಿಸಿದ್ದಾರೆ. ರಾಮಮಂದಿರ ಉದ್ಘಾಟನೆಗೊಳಿಸಲು ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ.ರಾಮಮಂದಿರ ಟ್ರಸ್ಟ್ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಆಹ್ವಾನ ನೀಡಿದ್ದಾರೆ. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕೂಡ ಈ ವೇಳೆ ಹಾಜರಿದ್ದರು. ರಾಮ ಮಂದಿರ ಉದ್ಫಾಟನೆ ಆಹ್ವಾನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಖುಷಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಸೋಶಿಯಲ್ ಮೀಡಿಯಾದಲ್ಲಿ ‘ಲಿಯೋ ಸ್ಕ್ಯಾಮ್’ನದ್ದೇ ಸದ್ದು: ಕ್ರೇಜ್ ಕಡಿಮೆ ಆಗ್ತಿದ್ದರೂ ಕಲೆಕ್ಷನ್ ಮಾತ್ರ ಜಬರ್ದಸ್ತ್..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more