PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

Suvarna News   | Asianet News
Published : Jan 08, 2022, 05:01 PM ISTUpdated : Jan 08, 2022, 05:54 PM IST

ಪಂಜಾಬ್‌ನಲ್ಲಿ (Punjab) ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. 

ನವದೆಹಲಿ (ಜ. 08): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಂಡು, ಚರ್ಚೆಯಾಗುತ್ತಿದೆ. ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ (Flyover) ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದಾರೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

 ಪಂಜಾಬ್‌ನಲ್ಲಿ ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ (Punjab High Court) ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದ ತನಿಖೆ ಸ್ಥಗಿತಕ್ಕೂ ಸೂಚಿಸಿದೆ.

ಫ್ಲೈಓವರ್‌ ಮೇಲೆ ಪ್ರಧಾನಿ ನರೇಂದ್ರ ಮೋದಿ ಅತಂತ್ರರಾಗಿ ಸಿಲುಕಿದ್ದಾಗ ಪಂಜಾಬ್‌ ಪೊಲೀಸರು ಏನೂ ಮಾಡದೆ ಸುಮ್ಮನಿದ್ದ ವಿಡಿಯೋ ವೈರಲ್‌ ಆಗಿದೆ. ಭದ್ರತಾ ಲೋಪ ಉಂಟಾದ ವೇಳೆ ಪ್ರಧಾನಿಯನ್ನು ಸುರಕ್ಷಿತವಾಗಿರಿಸಲು ಎಸ್‌ಪಿಜಿ ತಂಡದವರು ಆತಂಕದಿಂದ ಯತ್ನಿಸುತ್ತಿರುವುದು ಹಾಗೂ ಪೊಲೀಸರು ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಜೊತೆಗೆ ಫ್ಲೈಓವರ್ ಮೇಲೆ ಪ್ರಧಾನಿ ಮೊದಿ ಕಳೆದ 20 ನಿಮಿಷ ಹೇಗಿತ್ತು..? ಎಕ್ಸ್‌ಕ್ಲೂಸಿವ್ ವಿಡಿಯೋ

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more