PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

Suvarna News   | Asianet News
Published : Jan 08, 2022, 05:01 PM ISTUpdated : Jan 08, 2022, 05:54 PM IST

ಪಂಜಾಬ್‌ನಲ್ಲಿ (Punjab) ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. 

ನವದೆಹಲಿ (ಜ. 08): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಂಡು, ಚರ್ಚೆಯಾಗುತ್ತಿದೆ. ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ (Flyover) ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದಾರೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

 ಪಂಜಾಬ್‌ನಲ್ಲಿ ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ (Punjab High Court) ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದ ತನಿಖೆ ಸ್ಥಗಿತಕ್ಕೂ ಸೂಚಿಸಿದೆ.

ಫ್ಲೈಓವರ್‌ ಮೇಲೆ ಪ್ರಧಾನಿ ನರೇಂದ್ರ ಮೋದಿ ಅತಂತ್ರರಾಗಿ ಸಿಲುಕಿದ್ದಾಗ ಪಂಜಾಬ್‌ ಪೊಲೀಸರು ಏನೂ ಮಾಡದೆ ಸುಮ್ಮನಿದ್ದ ವಿಡಿಯೋ ವೈರಲ್‌ ಆಗಿದೆ. ಭದ್ರತಾ ಲೋಪ ಉಂಟಾದ ವೇಳೆ ಪ್ರಧಾನಿಯನ್ನು ಸುರಕ್ಷಿತವಾಗಿರಿಸಲು ಎಸ್‌ಪಿಜಿ ತಂಡದವರು ಆತಂಕದಿಂದ ಯತ್ನಿಸುತ್ತಿರುವುದು ಹಾಗೂ ಪೊಲೀಸರು ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಜೊತೆಗೆ ಫ್ಲೈಓವರ್ ಮೇಲೆ ಪ್ರಧಾನಿ ಮೊದಿ ಕಳೆದ 20 ನಿಮಿಷ ಹೇಗಿತ್ತು..? ಎಕ್ಸ್‌ಕ್ಲೂಸಿವ್ ವಿಡಿಯೋ

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more