PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

Suvarna News   | Asianet News
Published : Jan 08, 2022, 05:01 PM ISTUpdated : Jan 08, 2022, 05:54 PM IST

ಪಂಜಾಬ್‌ನಲ್ಲಿ (Punjab) ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. 

ನವದೆಹಲಿ (ಜ. 08): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಂಡು, ಚರ್ಚೆಯಾಗುತ್ತಿದೆ. ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ (Flyover) ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದಾರೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

 ಪಂಜಾಬ್‌ನಲ್ಲಿ ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ (Punjab High Court) ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದ ತನಿಖೆ ಸ್ಥಗಿತಕ್ಕೂ ಸೂಚಿಸಿದೆ.

ಫ್ಲೈಓವರ್‌ ಮೇಲೆ ಪ್ರಧಾನಿ ನರೇಂದ್ರ ಮೋದಿ ಅತಂತ್ರರಾಗಿ ಸಿಲುಕಿದ್ದಾಗ ಪಂಜಾಬ್‌ ಪೊಲೀಸರು ಏನೂ ಮಾಡದೆ ಸುಮ್ಮನಿದ್ದ ವಿಡಿಯೋ ವೈರಲ್‌ ಆಗಿದೆ. ಭದ್ರತಾ ಲೋಪ ಉಂಟಾದ ವೇಳೆ ಪ್ರಧಾನಿಯನ್ನು ಸುರಕ್ಷಿತವಾಗಿರಿಸಲು ಎಸ್‌ಪಿಜಿ ತಂಡದವರು ಆತಂಕದಿಂದ ಯತ್ನಿಸುತ್ತಿರುವುದು ಹಾಗೂ ಪೊಲೀಸರು ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಜೊತೆಗೆ ಫ್ಲೈಓವರ್ ಮೇಲೆ ಪ್ರಧಾನಿ ಮೊದಿ ಕಳೆದ 20 ನಿಮಿಷ ಹೇಗಿತ್ತು..? ಎಕ್ಸ್‌ಕ್ಲೂಸಿವ್ ವಿಡಿಯೋ

 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more