PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

PM Security Breach: ಫ್ಲೈಓವರ್‌ನಲ್ಲಿ 20 ನಿಮಿಷ ಕಳೆದ ಮೋದಿ, ಪಂಜಾಬ್ ಸರ್ಕಾರದ ಪ್ರೀಪ್ಲ್ಯಾನ್.?

Published : Jan 08, 2022, 05:01 PM ISTUpdated : Jan 08, 2022, 05:54 PM IST

ಪಂಜಾಬ್‌ನಲ್ಲಿ (Punjab) ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. 

ನವದೆಹಲಿ (ಜ. 08): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಂಡು, ಚರ್ಚೆಯಾಗುತ್ತಿದೆ. ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ (Flyover) ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದಾರೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

 ಪಂಜಾಬ್‌ನಲ್ಲಿ ಪ್ರಧಾನಿ ಭೇಟಿ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ವಿಚಾರಣೆ ಆರಂಭಿಸಿರುವ ಸುಪ್ರೀಂಕೋರ್ಟ್‌ (Supreme Court) ಪ್ರಧಾನಿಯ ಪ್ರಯಾಣದ ದಾಖಲೆಗಳನ್ನು ತಕ್ಷಣ ವಶಪಡಿಸಿಕೊಂಡು ಸುರಕ್ಷಿತವಾಗಿರಿಸುವಂತೆ ಪಂಜಾಬ್‌ ಹೈಕೋರ್ಟ್‌ನ (Punjab High Court) ರಿಜಿಸ್ಟ್ರಾರ್‌ ಜನರಲ್‌ಗೆ ನಿರ್ದೇಶನ ನೀಡಿದೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯದ ತನಿಖೆ ಸ್ಥಗಿತಕ್ಕೂ ಸೂಚಿಸಿದೆ.

ಫ್ಲೈಓವರ್‌ ಮೇಲೆ ಪ್ರಧಾನಿ ನರೇಂದ್ರ ಮೋದಿ ಅತಂತ್ರರಾಗಿ ಸಿಲುಕಿದ್ದಾಗ ಪಂಜಾಬ್‌ ಪೊಲೀಸರು ಏನೂ ಮಾಡದೆ ಸುಮ್ಮನಿದ್ದ ವಿಡಿಯೋ ವೈರಲ್‌ ಆಗಿದೆ. ಭದ್ರತಾ ಲೋಪ ಉಂಟಾದ ವೇಳೆ ಪ್ರಧಾನಿಯನ್ನು ಸುರಕ್ಷಿತವಾಗಿರಿಸಲು ಎಸ್‌ಪಿಜಿ ತಂಡದವರು ಆತಂಕದಿಂದ ಯತ್ನಿಸುತ್ತಿರುವುದು ಹಾಗೂ ಪೊಲೀಸರು ಏನೂ ಆಗಿಲ್ಲ ಎಂಬಂತೆ ವರ್ತಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಜೊತೆಗೆ ಫ್ಲೈಓವರ್ ಮೇಲೆ ಪ್ರಧಾನಿ ಮೊದಿ ಕಳೆದ 20 ನಿಮಿಷ ಹೇಗಿತ್ತು..? ಎಕ್ಸ್‌ಕ್ಲೂಸಿವ್ ವಿಡಿಯೋ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more